ಬೃಹತ್ ಸಿದ್ಧಚಕ್ರ ಮಹಾಮಂಡಲ ವಿಧಾನ ಮಹೋತ್ಸವ ಆರಂಭ
The grand Siddhachakra Mahamandal Vidhana festival begins
ಹಾವೇರಿ: ಬೃಹತ್ ಸಿದ್ಧಚಕ್ರ ಮಹಾಮಂಡಲ ವಿಧಾನ ಮಹೋತ್ಸವ ಸಮಿತಿ ಹಾಗೂ ಹಾವೇರಿಯ ಭಗವನಾ ಶ್ರೀ 1008 ನೇಮಿನಾಥ ದಿಗಂಬರ ಜೈನ ಮಂದಿರ ಕಮೀಟಿ ಸಹಯೋಗದಲ್ಲಿ ಬೃಹತ್ ಸಿದ್ಧಚಕ್ರ ಮಹಾಮಂಡಲ ವಿಧಾನ ಮಹೋತ್ಸವ ಚರ್ಯಾಶಿರೋಮಣಿ ಪರಮಪೂಜ್ಯ ಮುನಿಶ್ರೀ 108 ವಿದಿತಸಾಗರ ಮಹಾರಾಜರ ದಿವ್ಯ ಸಾನಿಧ್ಯದಲ್ಲಿ ಇಂದು ಹಾವೇರಿ ನಗರದ ರಜನಿ ಸಭಾಂಗಣದಲ್ಲಿ ಶುಕ್ರವಾರ ಚಾಲನೆ ನೀಡಲಾಯಿತು.
ಮಂಗಲಸ್ತುತಿ, ಜಲಾಭಿಷೇಕ, ಗಂಧಾಭಿಷೇಕ, ಪುಷ್ಪವೃಷ್ಠಿ, ಬೃಹತ್ ಶಾಂತಿಧಾರೆ. ಧ್ವಜಾರೋಹಣ, ಘಟಯಾತ್ರೆ, ಮಂಟಪ ಉದ್ಘಾಟನೆ, ಮಂಡಲ ಶುದ್ಧಿ, ವಿಧಾನ ಕ್ಷೇತ್ರ ಶುದ್ಧಿ, ಪ್ರತಿಷ್ಠಾಚಾರ್ಯರ ನಿಮಂತ್ರಣ, ಮಂಗಲ ಕಲಶ ಸ್ಥಾಪನೆ, ನಿತ್ಯಪೂಜೆ, ದೇವಶಾಸ್ತ್ರ ಗುರುಪೂಜೆ ನಂತರ ಬೃಹತ್ ಶ್ರೀ ಸಿದ್ಧಚಕ್ರ ಮಹಾಮಂಡಲ ವಿಧಾನೆ ಪ್ರಾರಂಭವಾಯಿತು. ಬೃಹತ್ ಸಿದ್ಧಚಕ್ರ ಮಹಾಮಂಡಲ ವಿಧಾನ ಮಹೋತ್ಸವ ಆರಾಧನೆಯಲ್ಲಿ 600ಕ್ಕೂ ಅಧಿಕ ಶ್ರಾವಕ ಮತ್ತು ಶ್ರಾವಕಿಯರು ಭಕ್ತಿಭಾವದಿಂದ ಪಾಲ್ಗೊಂಡಿದ್ದರು.
ಪ್ರತಿಷ್ಠಾಚಾರ್ಯರಾದ ಪ್ರತಿಮಾಧಾರಿ ಸದಲಗಾದ ಮಾಣಿಕ ಶ್ರೀಪಾಲ ಚಂದಗಡೆ ಸದಲಗಾ ಮತ್ತು ಪ್ರತಿಮಾಧಾರಿಗಳಾದ ಹಾರೋಗೇರಿಯ ಸಿದ್ದಗೌಡ ಪಾಟೀಲ, ಬ್ರ. ಸಾಧನಾ ದೀದಿ, ಬಾಲ ಬ್ರಹ್ಮಚಾರಿ ಮಹಾವೀರ ಭಯ್ಯಾಜಿ ಹಾಗೂ ಬ್ರ. ಜಯಕುಮಾರ ಭಯ್ಯಾಜಿ, ಬೆಳ್ತಂಗಡಿಯ ಜಿನೇಂದ್ರ ಬಂಗ ಅವರುಗಳ, ಪ್ರತಿಮಾಧಾರಿಗಳು ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 