ಬೈಕ್ ನಲ್ಲಿ ಮನೆಗೆ ತೇರುಳಿತಿದ್ದಾಗ ಅಪಹರಣ ಮಾಡಿದ ದುಷ್ಕರ್ಮಿಗಳು
The miscreants kidnapped him while he was riding home on a bike
ಬೈಕ್ ನಲ್ಲಿ ಮನೆಗೆ ತೇರುಳಿತಿದ್ದಾಗ ಅಪಹರಣ ಮಾಡಿದ ದುಷ್ಕರ್ಮಿಗಳು
ಮುಂಡಗೋಡ 11: ಪಟ್ಟಣದ ಶಾಸಕರ ಮಾದರಿ ಶಾಲೆ ಮುಂಭಾಗ್ ರಸ್ತೆಯಲ್ಲಿ ಬೈಕನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಕಾರೊಂದು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆಯಿತಲ್ಲದೇ ಬೈಕ್ ಸವಾರನನ್ನು ಕಾರಿನಲ್ಲಿದ್ದವರು ಅಪಹರಿಸಿಕೊಂಡು ಹೋದ ಘಟನೆ ಗುರುವಾರ ಸಂಜೆ ಜರುಗಿದೆ. ಪಟ್ಟಣದ ಯುವಮುಖಂಡ ನೂರಾನಿಗಲ್ಲಿಯ ನಿವಾಸಿ ಜಮೀರ ಅಹ್ಮದ್ ದರ್ಗಾವಾಲೆ(37) ಎಂಬಾತನೇ ಅಪಹರಣಕ್ಕೆ ಒಳಗಾದ ವ್ಯಕ್ತಿಯಾಗಿದ್ದಾನೆ. ಶಾಸಕರ ಮಾದರಿ ಶಾಲೆಯ ಮುಂಭಾಗದ ಮಾರ್ಗವಾಗಿ ಬೈಕನಲ್ಲಿ ಮನೆಗೆ ಹೋಗುತಿರುವಾಗ ದುಷ್ಕರ್ಮಿಗಳು ಕಾರಿನಲ್ಲಿ ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದ್ದಾರೆ. ಬೈಕನಲ್ಲಿ ಹಿಂಬದಿಯಲ್ಲಿ ಮತ್ತೊಬ್ಬ ಸವಾರ ಆರೋಪಿಗಳಿಂದ ತಪ್ಪಿಸಿಕೊಂಡು, ಪೊಲೀಸರಿಗೆ ಘಟನೆಯ ವಿವರ ತಿಳಿಸಿದ್ದಾನೆ. ಪಟ್ಟಣದ ಜಮೀರ ಅಹ್ಮದ ದರ್ಗಾವಾಲೆಯನ್ನು ಕಾರಿನಲ್ಲಿ ಬಂದ ವ್ಯಕ್ತಿಗಳು ಅಪಹರಿಸಿದ ಘಟನೆ ಬೇಧಿಸಲು ನಾಲ್ಕು ತಂಡಗಳನ್ನು ರಚಿಸಲಾಗಿತ್ತು. ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು. ಕೃತ್ಯದ ಹಿಂದೆ ಯಾರಿದ್ದಾರೆ. ಯಾವ ಉದ್ದೇಶಕ್ಕೆ ಅಪಹರಣ ಮಾಡಿದ್ದರು ಎಂಬುದು ತನಿಖೆಯ ನಂತರ ತಿಳಿಯಲಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ತಿಳಿಸಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 