ಬೈಕ್ ನಲ್ಲಿ ಮನೆಗೆ ತೇರುಳಿತಿದ್ದಾಗ ಅಪಹರಣ ಮಾಡಿದ ದುಷ್ಕರ್ಮಿಗಳು
The miscreants kidnapped him while he was riding home on a bike
ಬೈಕ್ ನಲ್ಲಿ ಮನೆಗೆ ತೇರುಳಿತಿದ್ದಾಗ ಅಪಹರಣ ಮಾಡಿದ ದುಷ್ಕರ್ಮಿಗಳು
ಮುಂಡಗೋಡ 11: ಪಟ್ಟಣದ ಶಾಸಕರ ಮಾದರಿ ಶಾಲೆ ಮುಂಭಾಗ್ ರಸ್ತೆಯಲ್ಲಿ ಬೈಕನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಕಾರೊಂದು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆಯಿತಲ್ಲದೇ ಬೈಕ್ ಸವಾರನನ್ನು ಕಾರಿನಲ್ಲಿದ್ದವರು ಅಪಹರಿಸಿಕೊಂಡು ಹೋದ ಘಟನೆ ಗುರುವಾರ ಸಂಜೆ ಜರುಗಿದೆ. ಪಟ್ಟಣದ ಯುವಮುಖಂಡ ನೂರಾನಿಗಲ್ಲಿಯ ನಿವಾಸಿ ಜಮೀರ ಅಹ್ಮದ್ ದರ್ಗಾವಾಲೆ(37) ಎಂಬಾತನೇ ಅಪಹರಣಕ್ಕೆ ಒಳಗಾದ ವ್ಯಕ್ತಿಯಾಗಿದ್ದಾನೆ. ಶಾಸಕರ ಮಾದರಿ ಶಾಲೆಯ ಮುಂಭಾಗದ ಮಾರ್ಗವಾಗಿ ಬೈಕನಲ್ಲಿ ಮನೆಗೆ ಹೋಗುತಿರುವಾಗ ದುಷ್ಕರ್ಮಿಗಳು ಕಾರಿನಲ್ಲಿ ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದ್ದಾರೆ. ಬೈಕನಲ್ಲಿ ಹಿಂಬದಿಯಲ್ಲಿ ಮತ್ತೊಬ್ಬ ಸವಾರ ಆರೋಪಿಗಳಿಂದ ತಪ್ಪಿಸಿಕೊಂಡು, ಪೊಲೀಸರಿಗೆ ಘಟನೆಯ ವಿವರ ತಿಳಿಸಿದ್ದಾನೆ. ಪಟ್ಟಣದ ಜಮೀರ ಅಹ್ಮದ ದರ್ಗಾವಾಲೆಯನ್ನು ಕಾರಿನಲ್ಲಿ ಬಂದ ವ್ಯಕ್ತಿಗಳು ಅಪಹರಿಸಿದ ಘಟನೆ ಬೇಧಿಸಲು ನಾಲ್ಕು ತಂಡಗಳನ್ನು ರಚಿಸಲಾಗಿತ್ತು. ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು. ಕೃತ್ಯದ ಹಿಂದೆ ಯಾರಿದ್ದಾರೆ. ಯಾವ ಉದ್ದೇಶಕ್ಕೆ ಅಪಹರಣ ಮಾಡಿದ್ದರು ಎಂಬುದು ತನಿಖೆಯ ನಂತರ ತಿಳಿಯಲಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 