ಅನಧೀಕೃತ ಕಟ್ಟಡ ನಿರ್ಮಿಸಿದರೆ ಕಚೇರಿಗೆ ಮಾಹಿತಿ ನೀಡಬೇಕು
ಲೋಕದರ್ಶನ ವರದಿ
ಕಾಗವಾಡ 18: ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ಸರ್ಕಾರಿ ರಸ್ತೆ, ಗಲ್ಲಿ, ಉದ್ಯಾನ ಈ ಸ್ಥಳಗಳಲ್ಲಿ ಅನಧಿಕೃತವಾಗಿ ಯಾವುದೇ ಕಟ್ಟಡ ನಿಮರ್ಿಸಿದರೆ ಕೂಡಲೆ ಸಾರ್ವಜನಿಕರು ತಹಶೀಲ್ದಾರ ಕಚೇರಿಗೆ ಮಾಹಿತಿ ನೀಡಬೇಕು. ಮಾಹಿತಿ ನೀಡಿದ ಸಾರ್ವಜನಿಕರ ಹೆಸರು ಗುಪ್ತವಾಗಿ ಇಡಲಾಗುವುದೆಂದು ಕಾಗವಾಡ ತಹಸೀಲ್ದಾರ ಪ್ರಮೀಳಾ ದೇಶಪಾಂಡೆ ಹೇಳಿದರು.
ದಿ.17ರಂದು ಕಾಗವಾಡ ತಹಸೀಲ್ದಾರ ಕಚೇರಿಯಲ್ಲಿ ತಾಲೂಕಾ ಮಟ್ಟದ ಎಲ್ಲ ಗ್ರಾಮಲೇಕ್ಕಾಧಿಕಾರಿಗಳ ಮತ್ತು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ವಿಶೇಷ ಸಭೆ ಹಮ್ಮಿಕೊಳ್ಳಲಾಗಿತ್ತು.
ಸಭೆಯಲ್ಲಿ ಕಾಗವಾಡ ತಾಲೂಕಾ ಪಂಚಾಯತಿ ಅಭಿವೃದ್ಧಿ ಅಧಿಕಾರಿ ವೀರಣಗೌಡ ಅವನಗೌಡರ, ಗ್ರೇಡ್-2 ತಹಸೀಲ್ದಾರ ವಿಜಯ ಚೌಗುಲೆ, ಕಂದಾಯ ನೀರಿಕ್ಷಕ ಎಸ್.ಬಿ.ಮುಲ್ಲಾ ಇವರ ಉಪಸ್ಥಿತಿಯಲ್ಲಿ ಸಭೆ ಜರುಗಿದ್ದು. ಎಲ್ಲ ಸಿಬ್ಬಂದಿಗಳಿಗೆ ತಹಸೀಲ್ದಾರರು ಈ ಆದೇಶವನ್ನು ನೀಡಿದ್ದಾರೆ. ತಹಸೀಲ್ದಾರ ಕಚೇರಿಯ ಸಿಬ್ಬಂದಿಗಳಾದ ಪೂಜಾ ಹೋಗಾರ್ ಮೊಬೈಲ್ ನಂ. 9606702634 ಈ ಮೊಬೈಲ್ ಸಂಖ್ಯೆಗೆ ಮಾಹಿತಿ ನೀಡಿದಲ್ಲಿ ಅನಧಿಕೃತವಾಗಿ ಕಟ್ಟಡ ನಿಮರ್ಿಸಿದವರ ಮೇಲೆ ಕೂಡಲೆ ಕ್ರಮಜರುಗಿಸುವದಾಗಿ ತಹಸೀಲ್ದಾರ ಶ್ರೀಮತಿ ಪ್ರಮೀಳಾ ದೇಶಪಾಂಡೆ ಸಾರ್ವಜನಿಕರಿಗೆ ಆಹ್ವಾನಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 