ಸಾಂಗಲಿ ಜಿಲ್ಲಾಧಿಕಾರಿಗಳ ಮೂಲಕ ಮಹಾರಾಷ್ಟ್ರ ಸರಕಾರಕ್ಕೆ ಆಗ್ರಹ: ಕೃಷ್ಣಾ ನದಿಗೆ ನೀರು ಹರಿಸಬೇಕೆಂದು ಒತ್ತಾಯಿಸಿ ಕರವೇ ಮನವಿ
ಅಥಣಿ 26: ಕರ್ನಾ ಟಕ ವ್ಯಾಪ್ತಿಯ ಕೃಷ್ಣಾ ನದಿಗೆ 4ಟಿಎಂಸಿ ನೀರು ಹರಿಸಬೇಕೆಂದು ಕನರ್ಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಸಾಂಗಲಿ ಜಿಲ್ಲಾಧಿಕಾರಿ ಅಭಿಜೀತ ಚೌಧರಿ ಮೂಲಕ ಮಹಾರಾಷ್ಟ್ರ ಸರಕಾರಕ್ಕೆ ಮನವಿ ಸಲ್ಲಿಸಿ ಆಗ್ರಹಿಸಿದರು.
ಕಳೆದ ಒಂದು ತಿಂಗಳಿನಿಂದ ಕೃಷ್ಣಾ ನದಿಗೆ ನೀರು ಇರದೆ ಇದ್ದುದರಿಂದ ಕೃಷ್ಣಾ ನದಿ ದಡದ ಸುಮಾರ 8 ತಾಲೂಕುಗಳ ಸಾವಿರಾರು ಗ್ರಾಮಗಳಲ್ಲಿ ಕುಡಿಯುವ ನೀರಿನ ಹಾಹಾಕಾರ ಉಂಟಾಗಿದೆ. ಇದರಿಂದ ಜನ ಜಾನುವಾರುಗಳು ನೀರಿಗಾಗಿ ಪರದಾಡುವ ಸ್ಥಿತಿ ಬಂದೊದಗಿದೆ. ಸಾವಿರಾರು ಎಕರೆ ಪ್ರದೇಶದಲ್ಲಿ ಬೆಳೆದ ಕಬ್ಬು ಹಾಗೂ ಇನ್ನಿತರ ವಾಣಿಜ್ಯ ಬೆಳೆಗಳು ಒಣಗುವ ಹಂತ ತಲುಪಿರುವುದರಿಂದ ರೈತರಿಗೆ ನೂರಾರು ಕೋಟಿ ರೂಪಾಯಿ ಹಾನಿಯಾಗುತ್ತಿದೆ. ಇಂತಹ ಸಂಕಷ್ಟದ ಸ್ಥಿತಿಯನ್ನು ಮಹಾರಾಷ್ಟ್ರ ಸರಕಾರದ ಮುಖ್ಯಮಂತ್ರಿಗಳಿಗೆ ಮತ್ತು ಮುಖ್ಯ ಕಾರ್ಯದಶರ್ಿಗಳಿಗೆ ಮನವರಿಕೆ ಮಾಡಿಕೊಡುವ ಮೂಲಕ ಅತಿ ಶೀಘ್ರದಲ್ಲಿಯೇ ಕೃಷ್ಣಾ ನದಿಗೆ ಕೋಯ್ನಾ ಹಾಗೂ ವಿವಿಧ ಜಲಾಶಯಗಳಿಂದ 4 ಟಿಎಂಸಿ ನೀರು ಹರಿಸಲು ಒಪ್ಪಿಗೆ ಪಡೆಯಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಕನರ್ಾಟಕ ರಕ್ಷಣಾ ವೇದಿಕೆಯ ತಾಲೂಕಾ ಅಧ್ಯಕ್ಷ ಬಸನಗೌಡ ಪಾಟೀಲ (ಬೊಮ್ನಾಳ), ಕಾಯರ್ಾಧ್ಯಕ್ಷ ಅನೀಲ ಸೌದಾಗರ ಮಂಜುನಾಥ ಹೋಳಿಕಟ್ಟಿ, ಸುಭಾಷ ಕಾಂಬಳೆ, ರಾಕೇಶ ಮೈಗೂರ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 