ಜಿಂಕೆ ಮರಿ ರಕ್ಷಿಸಿ ಅರಣ್ಯ ಇಲಾಖೆಗೆ ಒಪ್ಪಿಸಿದ ಸಾರ್ವಜನಿಕರು
ಮುಂಡಗೋಡ 17: ನರಿಗಳ ದಾಳಿಯಿಂದ ಜಿಂಕೆ ಮರಿಯನ್ನು ರಕ್ಷಿಸಿ ಅರಣ್ಯ ಇಲಾಖೆಗೆ ಒಪ್ಪಿಸಿದ ಸಾರ್ವಜನಿಕರು.
ತಾಲೂಕಿನ ಚವಡಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಲಕ್ಕೊಳ್ಳಿ ಗ್ರಾಮದ ಅರಣ್ಯದಲ್ಲಿ ಸಾಯಂಕಾಲ ಈ ಘಟನೆ ನಡೆದಿದೆ.
ಮುಂಡಗೋಡದಿಂದ ಹನುಮಾಪೂರ ಗ್ರಾಮಕ್ಕೆ ಹಾದೂ ಹೋಗುವ ರಸ್ತೆಯ ಪಕ್ಕದ ಅರಣ್ಯದಲ್ಲಿ ಜಿಂಕೆ ಮತ್ತು ಮರಿಯನ್ನು ನರಿಗಳು ಕಾಡಿನಿಂದ ಬೆನ್ನಟ್ಟಿಕೊಂಡು ರಸ್ತೆಯ ಪಕ್ಕದಲ್ಲಿ ಹೋಗುತ್ತಿರುವಾಗ ಜಿಂಕೆಯು ಭಯದಿಂದ ಮರಿಯನ್ನು ಬಿಟ್ಟು ಓಡಿ ಕಾಡು ಸೇರಿಕೊಂಡಿದೆ. ಆಗ ನರಿಗಳು ಮರಿಯನ್ನು ತಿನ್ನಲು ಹೊಂಚು ಹಾಕುವ ಸಂದರ್ಭದಲ್ಲಿ ಅದೆ ರಸ್ತೆಯಲ್ಲಿ ಹಾದು ಹೋಗುತ್ತಿದ್ದ ಲಕ್ಷಣ ಬನಸೋಡೆ ಹಾಗೂ ಅವರ ಸ್ನೇಹಿತರು ನರಿಗಳನ್ನು ಓಡಿಸಿ ಜಿಂಕೆ ಮರಿಯನ್ನು ರಕ್ಷಿಸಿದ್ದಾರೆ. ಅದೃಷ್ಟವಷಾತ್ ಜಿಂಕೆ ಮರಿಗೆ ಯಾವುದೆ ಪ್ರಾಣಾಪಾಯವಾಗಿಲ್ಲ. ಜಿಂಕೆ ಮರಿಯನ್ನು ತಂದು ಸುರಕ್ಷಿತವಾಗಿ ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 