ಹಳೆ ತಹಶೀಲ್ದಾರ್ ಕಚೇರಿ ಮೇಲ್ಚಾವಣಿ ಶಿಥಿಲ: ಅಧಿಕಾರಿಗಳ ನಿರ್ಲಕ್ಷ್ಯ
The roof of the old Tahsildar's office is dilapidated: Negligence of the officials
ಜಮಖಂಡಿ : ನಗರದ ಹಳೆ ತಹಶೀಲ್ದಾರ್ ಕಚೇರಿಯು ಶಿಥಿಲಗೊಂಡಿದ್ದು, ಕುಸಿಯುವ ಹಂತದಲಿದೆ. ದಿನದಿಂದ ದಿನಕ್ಕೆ ಮೇಲ್ಚಾವಣಿ ಸಿಮೆಂಟ್ ಉದುರುತ್ತಿದ್ದರು ಅಧಿಕಾರಿಗಳ ನಿರ್ಲಕ್ಷದಿಂದ ಸಾರ್ವಜನಿಕರಲ್ಲಿ ಆತಂಕ ಮೂಡಿದೆ. ಪ್ರತಿ ದಿನ ನೂರಾರು ಜನರು ತಮ್ಮ ಕೆಲಸ, ಕಾರ್ಯಗಳ ಬಗ್ಗೆ ಕಚೇರಿಗೆ ಬರುವ ಜನರು ಜೀವ ಭಯದಲ್ಲಿಯೆ ಬರುತಿದ್ದಾರೆ. ಈ ಕಟ್ಟಡದಲ್ಲಿ ಶಿಶು ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ನಗರ ಯೋಜನಾ ಪ್ರಾಧಿಕಾರ, ಅಲ್ಪಸಂಖ್ಯಾತರ ಇಲಾಖೆ, ಭೂಮಾಪನ ಇಲಾಖೆ, ಹಿಂದುಳಿದ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆಗಳು ಹೀಗೆ ಹಲವಾರು ಇಲಾಖೆಗಳು ಕಾರ್ಯನಿರ್ಸುತ್ತೇವೆ. ಕಚೇರಿಗೆ ಬರುವ ಸಾರ್ವಜನಿಕರು ಹಾಗೂ ಸಿಬ್ಬಂದಿಗಳು ಆತಂಕದಲ್ಲಿಯೇ ಬರುವ ಸ್ಥಿತಿ ಉಂಟಾಗಿದೆ.
ಪ್ರವೇಶ ದ್ವಾರದ ಮೇಲ್ಛಾವಣಿ ಸಂಪೂರ್ಣವಾಗಿ ಶಿಥಿಲಗೊಂಡು, ಕಬ್ಬಿಣದ ಸಲಾಕೆಗಳು ಜೋತು ಬಿದ್ದಿವೆ. ಅವುಗಳು ತುಂಡಾಗಿ ಸಾರ್ವಜನಿಕರ ಮೇಲೆ ಯಾವಾಗ ಬೇಕಾದರೂ ಬೀಳಬಹುದು, ಕಟ್ಟಡಕ್ಕೆ ಆಧಾರ ಸ್ತಂಭವಾಗಿರುವ ಪಿಲ್ಲರ್ಗಳು ಯಾವಾಗ ಬೇಕಾದರು ಕುಸಿದು ಬೀಳಬಹುದು. ಪಿಲ್ಲರದಲ್ಲಿನ ಕಾಂಕ್ರೀಟ್ ಉದುರಿ ಬಿದ್ದು ಕಬ್ಬಿಣದ ಸಲಾಕೆಗಳು ಹೊರಬಂದಿವೆ. ಈ ಕಟ್ಟಡದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು ಜೀವ ಭಯದಲ್ಲಿ ತಮ್ಮ ಕೆಲಸವನ್ನು ನಿರ್ವಹಿಸುತ್ತಿದ್ದಾರೆ. ಕುಸಿಯುತ್ತಿರುವ ಮೇಲ್ಚಾವಣಿಗೆ ಹೆದರಿ ಕಚೇರಿಗೆ ಬರುವ ಸಾರ್ವಜನಿಕರು ಹಿಂದೇಟು ಹಾಕುತ್ತಿದ್ದಾರೆ.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 