ವಿಳಂಬ ಧೋರಣೆ ಮುಂದುವರೆದರೆ ಹೋರಾಟ ತೀವ್ರ : ಕುತ್ಬುದ್ದೀನ್ ಖಾಜಿ
The struggle will intensify if the delay continues: Qutbuddin Qazi
ರಬಕವಿ-ಬನಹಟ್ಟಿ 28: ಕೇಂದ್ರ ಸರ್ಕಾರ ಹಾಗೂ ರೈಲ್ವೆ ಅಧಿಕಾರಿಗಳು ಮೀನಮೇಷ ಮಾಡದೆ ಕುಡಚಿಯಿಂದ ಜಮಖಂಡಿಯ ವರೆಗೆ ರೈಲುಮಾರ್ಗ ಕಾಮಗಾರಿ ನಿರಂತರ ಮುನ್ನಡೆಸಲೇಬೇಕು. ಜನಪ್ರತಿನಿಧಿಗಳ ಪೂರಕ ಭರವಸೆ ಹಾಗೂ ಕಾಮಗಾರಿ ಪ್ರಾರಂಭದ ನಂತರ ಬೆಳಗಾವಿ ಜಿಲ್ಲೆ ಕುಡಚಿಯಲ್ಲಿ 10 ದಿನಗಳ ಕಾಲ ನಡೆದ ಸತ್ಯಾಗ್ರಹ ಮೊಟಕುಗೊಳಿಸಿದ್ದೇವೆ. ವಿಳಂಬ ಧೋರಣೆ ಮುಂದುವರೆದರೆ ಮತ್ತೆ ಹೋರಾಟ ತೀವ್ರ ಗೊಳಿಸುವುದಾಗಿ ರೈಲ್ವೆ ಹೋರಾಟ ಸಮಿತಿ ಅಧ್ಯಕ್ಷ ಕುತ್ಬುದ್ದೀನ್ ಖಾಜಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಡಚಿ-ಬಾಗಲಕೋಟೆ ಮಾರ್ಗದ ಒಟ್ಟು 3000 ಎಕರೆ ಯಷ್ಟು ಭೂಮಿ ಸಂಪೂರ್ಣ ಸರ್ಕಾರದ ಸ್ವಾಧೀನವಾಗಿದೆ. ಸಚಿವ ಸತೀಶ ಜಾರಕಿಹೊಳಿ ಹಾಗೂ ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿಯವರ ಸ್ಪಂದನೆ ಮೇರೆಗೆ ಕೆಲಸ ನಿಲ್ಲಿಸದೆ ಮುಂದುವರಿಸುವ ಭರವಸೆ ನೀಡಿದ್ದು ಸ್ವಾಗತ. ಅದರಂತೆ ಕಾಮಗಾರಿಗೆ ವೇಗ ದೊರಕಿರುವುದರಿಂದ ಸತ್ಯಾಗ್ರಹ ಹಿಂಪಡೆಯಲಾಗಿದೆ ಎಂದರು.
ಕಾಮಗಾರಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಕಾರ್ಯ ಸಂಪೂರ್ಣಗೊಂಡಿದೆ. ರಾಜ್ಯದ ವಿರುದ್ಧ ಹೋರಾಟ ನಮ್ಮದಲ್ಲ. ಬದಲಾಗಿ ಕಾಮಗಾರಿಯ ಹೊಣೆ ಕೇಂದ್ರ ಸರ್ಕಾರದ್ದಾಗಿದ್ದು, ಈ ಭಾಗದ ಸಂಸದರು ಹಾಗೂ ರಾಜ್ಯ ರೈಲ್ವೆ ಮಂತ್ರಿಗಳ ಇಚ್ಛಾಶಕ್ತಿಯಿಂದ 2027 ರೊಳಗಾದರೂ ಕಾಮಗಾರಿ ಮುಗಿಸಬೇಕೆಂದು ಆಗ್ರಹಿಸಿದರು. ರೈತ ಮುಖಂಡ ಸುಭಾ ಶಿರಬೂರ, ರಾಜಶೇಖರ ಸೊರಗಾಂವಿ, ಡಾ. ರವಿ ಜಮಖಂಡಿ, ಬ್ರಿಜ್ಮೋಹನ ಡಾಗಾ, ಭುಜಬುಲಿ ಕೆಂಗಾಲಿ, ಈರ್ಪ ಹಿಪ್ಪರಗಿ ಇದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 