ಇಂದು ಭೀಮಾ ಕೋರೆಗಾಂವ ವಿಜಯೋತ್ಸವ
Today is the victory celebration of Bhima Koregaon.
ಮಹಾಲಿಂಗಪುರ:ನಗರದಲ್ಲಿ 4ನೇ ಬಾರಿಗೆ 2008ನೇ ಭೀಮಾ ಕೋರೆಗಾಂವ ವಿಜಯೋತ್ಸವ ಕಾರ್ಯಕ್ರಮ ಶನಿವಾರ ಮುಂಜಾನೆ 10 ಗಂಟೆಗೆ ಸ್ಥಳೀಯ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಆರಂಭವಾಗಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ಪೇಶ್ವೆಗಳ ವಿರುದ್ಧ ಸ್ವಾಭಿಮಾನದಿಂದ ಹೋರಾಡಿ ಗೆದ್ದು ಜಯಶಾಲಿಯಾದ ವೀರ ಮಹರ್ ಸೈನಿಕರಿಗೆ ಗುರು, ಹಿರಿಯರು ಮತ್ತು ಮುಖಂಡರೊಂದಿಗೆ ಠಾಣಾಧಿಕಾರಿ ಕಿರಣ ಸತ್ತಿಗೆರಿ ಪುಷ್ಪ ನಮನ ಸಲ್ಲಿಸುವರು. ಇದೇ ಸಂದರ್ಭದಲ್ಲಿ ಅಂಬೇಡ್ಕರ್ ಸರ್ಕಲ್ ನಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಸೇರುವ ಅಂಬೇಡ್ಕರ್ ಅಭಿಮಾನಿಗಳಿಂದ ಬೈಕ್ ರ್ಯಾಲಿ ನಡೆಯುವುದು.
ಸಮುದಾಯದ ಶಕ್ತಿಯನ್ನು ಆಂದೋಲನದ ರೂಪಕ್ಕೆ ಕೊಂಡೋಯ್ದ ಹಿರಿಮೆ ಡಾ. ಬಿ.ಆರ್.ಅಂಬೇಡ್ಕರ್ ಅವರು ಸ್ಥಾಪಿಸಿದ ಮೂಕ ನಾಯಕ ಪತ್ರಿಕೆಯದ್ದು.ಇದರ ಶತಮಾನೋತ್ಸವ ಸಮಾರಂಭವು ಕೂಡ ನಡೆಯಲಿದೆ. ಇದೆ ಸಂಜೆ 6 ಗಂಟೆಗೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಮೂರ್ತಿಯ ಮೆರವಣಿಗೆ ಬಸವೇಶ್ವರ ಸರ್ಕಲ್ ದಿಂದ ಆರಂಭವಾಗಿ ನಡುಚೌಕಿ,ಗಾಂಧಿ ಸರ್ಕಲ್ ಮಾರ್ಗವಾಗಿ ಮರಳಿ ಬಿ.ಆರ್. ಅಂಬೇಡ್ಕರ್ ಸರ್ಕಲ್ ಗೆ ಆಗಮಿಸಿ, ಪ್ರಸ್ತುತ ಇರುವ ಮುಖಂಡರುಗಳಿಂದ ಭೀಮಾ ಕೋರೆಗಾಂವ ಹೋರಾಟದ ಇತಿಹಾಸ ಕುರಿತು ಭಾಷಣ ನಡೆಯಲಿದೆ.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 