ಅರುಣ ಐಹೊಳೆಗೆ ಸನ್ಮಾನ
Tribute to Aruna Aihole
ರಾಯಬಾಗ 13: ಚಿತ್ರದುರ್ಗದ ಶ್ರೀ ಶಿವಶರಣ ಮಾದಾರ ಚೆನ್ನಯ್ಯ ಸೇವಾ ಸಮಿತಿ ರಾಜ್ಯ ಉಪಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಪ್ರಥಮ ಬಾರಿಗೆ ಚಿತ್ರದುರ್ಗದ ಶ್ರೀ ಶಿವಶರಣ ಮಾದಾರ ಚೆನ್ನಯ್ಯ ಗುರುಪೀಠಕ್ಕೆ ಶುಕ್ರವಾರ ಭೇಟಿಯಾದ ರಾಜ್ಯ ಉಪಾಧ್ಯಕ್ಷ ಅರುಣ ಐಹೊಳೆ ಅವರನ್ನು ಪೀಠಾಧ್ಯಕ್ಷ ಡಾ.ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮಿಜೀಯವರು ಸತ್ಕರಿಸಿ, ಆಶೀರ್ವಾದಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಚಿತ್ರದುರ್ಗದ ಶಿವಶರಣ ಮಾದಾರ ಚೆನ್ನಯ್ಯ ಗುರುಪೀಠ ಪೀಠಾಧ್ಯಕ್ಷ ಡಾ.ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮಿಜೀಯವರು, ಅರುಣ ಐಹೊಳೆ ಅವರು ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು ಹಾಗೂ ರಾಜ್ಯದ ತುಂಬಾ ಸಂಚರಿಸಿ ಸರ್ವ ಸಮಾಜದ ಮುಖಾಂತರ ಕೆಲಸ ಕಾರ್ಯಗಳನ್ನು ಮಾಡಿ ಕೀರ್ತಿ ಸಂಪಾದಿಸಬೇಕು ಎಂದು ಆಶೀರ್ವಾಚನ ಮಾಡಿದರು. ಅರುಣ ಐಹೊಳೆ ಅವರು ಮಾತನಾಡಿ, ತಮಗೆ ನೀಡಿದ ಜವಾಬ್ದಾರಿಯನ್ನು ವಹಿಸಿಕೊಂಡು, ಎಲ್ಲ ಕೆಲಸ ಕಾರ್ಯಗಳನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ, ಶ್ರೀಗಳ ಆಶೀರ್ವಾದ ಸದಾ ನಮ್ಮ ಮೇಲೆ ಇರಲಿ ಎಂದು ನುಡಿದರು.
ವಿವೇಕಾನಂದ ಯಮಕನಮರಡಿ, ಶ್ರೀಮಂತ ಕಾಂಬಳೆ, ಸುಭಾಸ್ ಮಲ್ಲಪ್ಪಗೊಳ, ದಯಾನಂದ ಬಂಬಲಾಡಿ, ಭರಮಪ್ಪ ಪೂಜಾರ, ಸಂಜೀವ ಮೈಶಾಳೆ, ಪ್ರಕಾಶ ತೇರದಾಳೆ, ಅಪ್ಪಾಸಾಬ ಕೆಂಗನ್ನವರ, ಸಂಗನಗೌಡ ಐಹೊಳೆ, ರಿತೇಶ್ ಅವಳೆ, ಮಾರುತಿ ಮಾಂಗ, ಅಜಿತ ಮಾಂಗ, ನೀಲಪ್ಪ ಐಹೊಳೆ ಸೇರಿ ಸಮಾಜದ ಮುಖಂಡರು ಇದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 