ಪತ್ರಕರ್ತ ಹನುಮಾನಸಿಂಗ್ ಜಮಾದಾರ ಅವರಿಗೆ ಸನ್ಮಾನ
Tribute to Journalist Hanuman Singh Jamadar
ಪತ್ರಕರ್ತ ಹನುಮಾನಸಿಂಗ್ ಜಮಾದಾರ ಅವರಿಗೆ ಸನ್ಮಾನ
ಗದಗ 3: ಹಿರಿಯ ಪತ್ರಕರ್ತ ಹನುಮಾನ ಸಿಂಗ್ ಜಮಾದಾರ ಅವರಿಗೆ 2023 ನೇ ಸಾಲಿನ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಲಭಿಸಿದ್ದಕ್ಕಾಗಿ ಸನ್ಮಾನಿಸಲಾಯಿತು.
1990 ರಿಂದ ಪತ್ರಿಕಾ ರಂಗದಲ್ಲಿ ಸೇವೆ ಸಲ್ಲಿಸಿದ ಅವರು ಹಲವಾರು ಪತ್ರಿಕಾ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದು ಪತ್ರಿಕಾ ರಂಗದಲ್ಲಿಯೇ 34 ವರ್ಷಗಳ ಅನುಭವ ಹೊಂದಿರುವ ಇವರು ಪ್ರಸ್ತುತ ಗದಗ ಜಿಲ್ಲೆಯಿಂದ ಪ್ರಕಟವಾಗುತ್ತಿರುವ ನವೋದಯ ಕನ್ನಡ ಪ್ರಾದೇಶಿಕ ಪತ್ರಿಕೆಯ ಹಿರಿಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರಿಗೆ ಈ ಹಿಂದೆ ಗದಗ ಜಿಲ್ಲಾಡಳಿತದಿಂದ ಪತ್ರಿಕಾ ರಂಗದ ಸೇವೆ ಗುರುತಿಸಿ ಸನ್ಮಾನಿಸಲಾಗಿತ್ತು.
ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಗದಗ ಕಚೇರಿಯಲ್ಲಿ ಶುಕ್ರವಾರ ಪ್ರಾಧಿಕಾರದ ಆಯುಕ್ತರಾದ ಡಾ. ಶರಣು ಗೋಗೇರಿ ಸೇರಿದಂತೆ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ್ವರ ವಿಭೂತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯ ಸ್ವಾಮಿ ಬಿ, ವಾರ್ತಾಧಿಕಾರಿ ವಸಂತ ಮಡ್ಲೂರ, ವಯಸ್ಕರ ಶಿಕ್ಷಣಾಧಿಕಾರಿ ಶಿವಕುಮಾರ ಕುರಿಯವರ ಸೇರಿದಂತೆ ಶಿವಶಂಕರ ಯಳವತ್ತಿ, ಸಂತೋಷ ಕುರಿ , ಪ್ರತೀಕ ಮೇಳನವರ, ಫಯಾಜ ನದಾಫ್ ಅವರುಗಳು ಸನ್ಮಾನಿಸಿ ಶುಭ ಕೋರಿದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 