ಇಬ್ರಾಹಿಂ ಸಾಬ್ ಬಿಸರಳ್ಳಿ, ಹೊನ್ನೂರು ಸಾಬ್ ಬೈರಾಪುರ ರಿಗೆ ಸನ್ಮಾನ
Tributes to Ibrahim Saab Bisaralli and Honnur Saab Bairapur
ಭಾಗ್ಯನಗರ 12 : ಪಟ್ಟಣ ಪಂಚಾಯತ ಹಂಗಾಮಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹೊನ್ನೂರು ಸಾಬ್ ಬೈರಾಪುರ ಹಾಗೂ ವಕೀಲರಾಗಿ 27 ವರ್ಷಗಳನ್ನು ಪೂರೈಸಿರುವ ಭಾಗ್ಯನಗರ ಜಾಮಿಯಾ ಮಸೀದಿ ಕಮಿಟಿಯ ಅಧ್ಯಕ್ಷರಾದ ಇಬ್ರಾಹಿಂ ಸಾಬ್ ಬಿಸರಳ್ಳಿ ಇವರಿಗೆ ಆತ್ಮೀಯವಾಗಿ ಸನ್ಮಾನಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ , ಸತತವಾಗಿ ಮೂರು ಸಲ ಸದಸ್ಯರಾಗಿ ಆಯ್ಕೆಯಾಗಿರುವ ಬೈರಾಪುರ ಪ್ರಸ್ತುತ ಪಟ್ಟಣ ಪಂಚಾಯತ್ ಸದಸ್ಯರಾಗಿ, ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಭಾಗ್ಯನಗರದ ಪಟ್ಟಣ ಪಂಚಾಯತ್ ಹಂಗಾಮಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಹಾಗೂ ವಕೀಲರಾಗಿ 27 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವ ಭಾಗ್ಯನಗರ ಜಾಮಿಯಾ ಮಸೀದಿ ಕಮಿಟಿಯ ಅಧ್ಯಕ್ಷರಾದ ಇಬ್ರಾಹಿಂಸಾಬ್ ಬಿಸರಳ್ಳಿ ಇವರಿಗೆ ಭಾಗ್ಯನಗರದ ಮುಸ್ಲಿಂ ಬಾಂಧವರ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿಉಪಾಧ್ಯಕ್ಷ ಮೌಲಾಹುಸೇನ ಹಣಗಿ, ಮೆಹಬೂಬಸಾಬ ಬಳಿಗಾರ, ರಶೀದ್ಸಾಬ್, ಹಾಜಿ ಕುತ್ಬುದ್ದೀನಸಾಬ್, ಬಾಬಾ ಪಟೇಲ್, ಶರೀಫಸಾಬ ಪಿಂಜಾರ, ಮೆಹಬೂಬ ಹಣಗಿ, ಮರ್ದಾನಸಾಬ ಹಿರೆಮಸೂತಿ, ನೂರಬಾಷಾ , ಕಬೀರಸಾಬ ಬೈರಾಪೂರ, ಅಮೀನ್ ಸಾಬ್ ಸೂಡಿ, ಮಹ್ಮದ್ ಸಾಬ್ ಬೈರಾಪುರ ಹಾಗೂ ಮೆಹಬೂಬಸಾಬ ಕೊತ್ವಾಲ, ಶಾಕೀರ್ ನದಾಪ, ಹಾಜಿ ಅತ್ತಾರ ಸಾಬ್, ಮಹ್ಮದ್ ರಫಿ ಬೈರಾಪೂರ ಇದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 