ಕುರಿ ಕಾಯುವವನ ಮಗನ ಯುಪಿಎಸ್ಸಿ ಸಾಧನೆ
UPSC success of a shepherd's son
ಕುರಿ ಕಾಯುವವನ ಮಗನ ಯುಪಿಎಸ್ಸಿ ಸಾಧನೆ
ಯರಗಟ್ಟಿ 23: ತಂದೆ ಕುರಿ ಕಾಯುತ್ತಾರೆ. ತಾಯಿ ಹೊಲದಲ್ಲಿ ಕೆಲಸ ಮಾಡುತ್ತಾರೆ. ಮನೆಯಲ್ಲಿ ಬಡತನ. ಮಗನಿಗೆ ಮಾತ್ರ ಇಡೀ ದೇಶವೇ ತನ್ನತ್ತ ತಿರುಗಿ ನೋಡಬೇಕೆಂಬ ಅಧಮ್ಯ ವಿಶ್ವಾಸ. ತಂದೆ - ತಾಯಿಗೆ ಮಗನ ಮೇಲೆ ಬೆಟ್ಟದಷ್ಟು ನೀರೀಕ್ಷೆ. ಅದು ಹುಸಿ ಆಗಲಿಲ್ಲ. ಸತತ ಓದು, ಪರಿಶ್ರಮ ಆತನ ಕೈ ಹಿಡಿದಿದ್ದು, ಯುಪಿಎಸ್ಸಿ ಪರೀಕ್ಷೆಯಲ್ಲಿ 910ನೇ ರಾ್ಯಂಕ್ ಪಡೆಯುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ. ಯರಗಟ್ಟಿ ತಾಲೂಕಿನ ಕೊಡ್ಲಿವಾಡ ಗ್ರಾಮದ ಹನುಮಂತಪ್ಪ ಯಲ್ಲಪ್ಪ ನಂದಿ ಯುಪಿಎಸ್ಸಿ ಪರೀಕ್ಷೆಯಲ್ಲಿ ಸಾಧನೆ ಮೆರೆದಿದ್ದಾರೆ. ಯುಪಿಎಸ್ಸಿಯಲ್ಲಿ ಮಗ ಪಾಸ್ ಆಗಿರುವ ಸುದ್ದಿ ತಿಳಿಯುತ್ತಿದ್ದಂತೆ ಕೊಡ್ಲಿವಾಡದ ಅವರ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಅಪ್ಪ ಯಲ್ಲಪ್ಪ, ಅವ್ವ ಕಾಳವ್ವ, ಪತ್ನಿ ಯಶೋಧಾ, ಸಹೋದರ ಆನಂದ ಸೇರಿ ಕುಟುಂಬಸ್ಥರ ಸಂತಸಕ್ಕೆ ಪಾರವೇ ಇಲ್ಲ. ಅಲ್ಲದೇ ಇಡೀ ಊರಿಗೆ ಊರೇ ಹನುಮಂತನ ಸಾಧನೆಗೆ ಹೆಮ್ಮೆ ಪಡುತ್ತಿದೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 