ಸಹಕಾರ ಸಂಘಕ್ಕೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಅವಿರೋಧ ಆಯ್ಕೆ
Uncontested election of President and Vice-President for Co-operative Society
ಸಹಕಾರ ಸಂಘಕ್ಕೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಅವಿರೋಧ ಆಯ್ಕೆ
ಕಂಪ್ಲಿ 23: ತಾಲೂಕಿನ ಎಮ್ಮಿಗನೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಕಾಸಿಂಸಾಬು ಬಿ ಹಾಗೂ ಉಪಾಧ್ಯಕ್ಷರಾಗಿ ಅಲ್ಲಾಸಾಬು ಸಿದ್ದಮ್ಮನಹಳ್ಳಿ ಅವಿರೋಧವಾಗಿ ಆಯ್ಕೆಗೊಂಡರು.
ಇಲ್ಲಿನ ಕಛೇರಿಯಲ್ಲಿ ಸೋಮವಾರ ಚುನಾವಣೆ ಜರುಗಿತು.
ಈ ಚುನಾವಣೆಯಲ್ಲಿ ತಲಾ ಒಬ್ಬರು ನಾಮಪತ್ರ ಸಲ್ಲಿಸಿದ ಹಿನ್ನಲೆ ಅವಿರೋಧವಾಗಿ ಅಧ್ಯಕ್ಷ ಸ್ಥಾನಕ್ಕೆ ಕಾಸಿಂಸಾಬು, ಉಪಾಧ್ಯಕ್ಷ ಸ್ಥಾನಕ್ಕೆ ಅಲ್ಲಾಸಾಬು ಆಯ್ಕೆಗೊಂಡಿದ್ದಾರೆ. ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಅವರು ಸಹಕಾರ ಸಂಘದ ಸರ್ವ ನಿರ್ದೇಶಕ ಹಾಗೂ ರೈತರ ಸಹಕಾರದೊಂದಿಗೆ ಅಭಿವೃದ್ಧಿಗೆ ಮುಂದಾಗಬೇಕು ಎಂದು ರಿಟರ್ನಿಂಗ್ ಅಧಿಕಾರಿ ರಮೇಶ ತಿಳಿಸಿದರು. ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಸನ್ಮಾನಿಸಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಮುಖ್ಯಕಾರ್ಯನಿರ್ವಾಹಕ ಈ.ಜಡೇಶರೆಡ್ಡಿ, ನಿರ್ದೇಶಕರಾದ ಉಮಾಪತಿ, ಬೇರಿ್ಗ ಮಹೇಶಗೌಡ, ರಾಜಾಸಾಬು, ಶೇಖರ್ಪ, ಪಕ್ಕೀರ್ಪ, ಅಮರೇಶ, ರಂಜಾನ್ ಸಾಬು, ರಾಮು, ಗಂಗಮ್ಮ, ತಿಪ್ಪಮ್ಮ ಹಾಗೂ ಗ್ರಾಮದ ಮುಖಂಡರು ಹಾಗೂ ರೈತರಿದ್ದರು. ಡಿ.002: ನೂತನ ಅಧ್ಯಕ್ಷ ಕಾಸಿಂಸಾಬು ಹಾಗೂ ಉಪಾಧ್ಯಕ್ಷ ಅಲ್ಲಾಸಾಬುಗೆ ಸನ್ಮಾನಿಸಿ ಗೌರವಿಸಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 