ಉಪಲೋಕಾಯುಕ್ತರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮ: ಅಗತ್ಯ ದಾಖಲೆ ತರಲು ಸಾರ್ವಜನಿಕರಿಗೆ ಸೂಚನೆ
Upalokayukta's complaint acceptance program
ಕೊಪ್ಪಳ 28: ಗೌರವಾನ್ವಿತ ಉಪಲೋಕಾಯುಕ್ತರಾದ ನ್ಯಾಯಮೂರ್ತಿ ಬಿ.ವೀರ್ಪ ಅವರು ಅಕ್ಟೋಬರ್ 30 ರಂದು ಸಾರ್ವಜನಿಕರ ದೂರು ಮತ್ತು ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮಕ್ಕೆ ಆಗಮಿಸುವ ದೂರುದಾರರು ಅಥವಾ ಅರ್ಜಿದಾರರು ಅಗತ್ಯ ದಾಖಲೆಗಳೊಂದಿಗೆ ಹಾಜರಾಗಲು ಸೂಚಿಸಿದೆ.
ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಅಕ್ಟೋಬರ್ 30 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಹಾಗೂ ಮಧ್ಯಾಹ್ನ 2.30 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸಾರ್ವಜನಿಕರ ಕುಂದುಕೊರತೆ ಹಾಗೂ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಯಲಿದೆ.ಆದ್ದರಿಂದ ಸಾರ್ವಜನಿಕರು ಅಥವಾ ಅರ್ಜಿದಾರರು ನಿಗದಿತ ದಿನದಂದು ತಮ್ಮ ದೂರು ಅರ್ಜಿ ಹಾಗೂ ಅಗತ್ಯ ದಾಖಲೆಗಳು, ಆಧಾರ್ ಕಾರ್ಡ್ ಝರಾಕ್ಸ್ ಪ್ರತಿಯೊಂದಿಗೆ ಖುದ್ದು ಹಾಜರಾಗಿ ಉಪಲೋಕಾಯುಕ್ತರಿಗೆ ದೂರು ಸಲ್ಲಿಸಬೇಕು. ನಮೂನೆ 1 ಮತ್ತು 2 ಗಳನ್ನು ಅರ್ಜಿದಾರರಿಗೆ ಸ್ಥಳದಲ್ಲಿಯೇ ವಿತರಣೆ ಮಾಡಲಾಗುವುದು ಎಂದು ಕರ್ನಾಟಕ ಲೋಕಾಯುಕ್ತದ ರಾಯಚೂರು ಕಚೇರಿಯ ಪೊಲೀಸ್ ಅಧೀಕ್ಷಕರಾದ ಸತೀಶ ಎಸ್.ಚಿಟಗುಬ್ಬಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 