ದರ್ಗಾದಲ್ಲಿರುವ ಸೈಯ್ಯದ್ ಮೌಲಾ ಅಲಿ ಮರ್ದಾನ ಏ ಗೈಬ್ ವಲಿ ಅವರ ಉರುಸ್ ಕಾರ್ಯಕ್ರಮ
Urus program of Syed Maula Ali Mardana Ae Ghaib Wali in Dargah
ದರ್ಗಾದಲ್ಲಿರುವ ಸೈಯ್ಯದ್ ಮೌಲಾ ಅಲಿ ಮರ್ದಾನ ಏ ಗೈಬ್ ವಲಿ ಅವರ ಉರುಸ್ ಕಾರ್ಯಕ್ರಮ
ಹಾನಗಲ್ 22 : ಇಲ್ಲಿನ ದರ್ಗಾದಲ್ಲಿರುವ ಸೈಯ್ಯದ್ ಮೌಲಾ ಅಲಿ ಮರ್ದಾನ ಏ ಗೈಬ್ ವಲಿ ಅವರ ಉರುಸ್ ಕಾರ್ಯಕ್ರಮದಲ್ಲಿ ಶಾಸಕ ಶ್ರೀನಿವಾಸ ಮಾನೆ ಭಾಗವಹಿಸಿ, ಚಾದರ ಅರ್ಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಸಮಾಜದಲ್ಲಿ ಸಾಮರಸ್ಯ ಮೂಡಲಿ ಎನ್ನುವ ಸದುದ್ದೇಶದಿಂದ ನಮ್ಮ ಹಿರಿಯರು ಜಾತ್ರೆ, ಉತ್ಸವ, ಉರುಸು ಆಚರಿಸುತ್ತಾ ಬಂದಿದ್ದಾರೆ. ಇಂಥ ಆಚರಣೆಗಳ ನೆಪದಲ್ಲಿ ನಾವೆಲ್ಲರೂ ಒಂದೆಡೆ ಸೇರಿ, ಪರಸ್ಪರ ಬೆರೆಯುವುದರಿಂದ ಬಾಂಧವ್ಯ ಬೆಳೆಯಲಿದೆ. ಇಂದಿಗೂ ಕೂಡ ಗ್ರಾಮೀಣ ಪ್ರದೇಶಗಳಲ್ಲಿ ಹಿಂದೂಗಳ ಹಬ್ಬ ಹರಿದಿನಗಳಲ್ಲಿ ಮುಸ್ಲಿಂರು, ಮುಸ್ಲಿಂರ ಉರುಸು, ಮೊಹರಂ ಸೇರಿದಂತೆ ಇತರ ಆಚರಣೆಗಳಲ್ಲಿ ಹಿಂದೂಗಳು ಸಹ ಪಾಲ್ಗೊಂಡು ಸೌಹಾರ್ದತೆ ಮೆರೆಯುತ್ತಿರುವುದನ್ನು ಕಾಣುತ್ತೇವೆ. ಆಧುನಿಕತೆ ಎಷ್ಟೇ ಬೆಳೆದರೂ ಪದ್ಧತಿಗಳು ಮಾತ್ರ ಅಳಿದು ಹೋಗಿಲ್ಲ. ಎಲ್ಲರೂ ಒಂದಾಗಿ ಮಾನವೀಯ ಮೌಲ್ಯಗಳೊಂದಿಗೆ ಮುನ್ನಡೆಯಬೇಕಿದೆ. ಇಲ್ಲಿ ಯಾರೂ ಮೇಲಲ್ಲ, ಯಾರೂ ಕೀಳಲ್ಲ. ಮೇಲು, ಕೀಳು ಭಾವನೆ ಮೂಡದಂತೆ ಒಮ್ಮನಸಿನಿಂದ ಜೊತೆಗೂಡಿ ಸಾಗಬೇಕಿದೆ. ಅಂದಾಗ ಮಾತ್ರ ಸರ್ವಜನಾಂಗದ ಶಾಂತಿಯ ತೋಟದಲ್ಲಿ ಸಾಮಾಜಿಕ ನೆಮ್ಮದಿ ಮೂಡಲಿದೆ ಎಂದು ಶ್ರೀನಿವಾಸ ಮಾನೆ ಈ ಸಂದರ್ಭದಲ್ಲಿ ತಿಳಿಸಿದರು.
ಪ್ರಮುಖರಾದ ಮತೀನ್ ಶಿರಬಡಗಿ, ಖುರ್ಷಿದ್ಅಹ್ಮದ್ ಹುಲ್ಲತ್ತಿ, ಮರ್ದಾನಸಾಬ ಬಡಗಿ, ಮುಕ್ತಿಯಾರ್ ಖೇಣಿ, ಸಿಕಂದರ್ ವಾಲಿಕಾರ, ಇಲಿಯಾಸ್ ಮಿಠಾಯಿಗಾರ, ನಿಯಾಜ್ಅಹ್ಮದ್ ಸರ್ವಿಕೇರಿ, ದುದ್ದುಸಾಬ ಅಕ್ಕಿವಳ್ಳಿ, ಗೌಸ್ಮೋದೀನ್ ತಾಂಡೂರ, ಜಾಫರ್ ಬಾಳೂರ, ಖಾಲಿದ್ ಶೇಷಗಿರಿ, ಫೈರೋಜ್ ಶಿರಬಡಗಿ, ನಿಸಾರ್ ಖಾಜಿ, ನಿಸಾರ ಬಡಗಿ ಸೇರಿದಂತೆ ಇನ್ನೂ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 