ವಾಜಪೇಯಿ ವಸತಿ ಯೋಜನೆ ಬಡವರ ಆತ್ಮಸ್ಥೈರ್ಯ: ಮಾಲಗಿತ್ತಿ
ಲೋಕದರ್ಶನ ವರದಿ
ಕೊಪ್ಪಳ 03: ಬಡತನ ರೇಖೆಗಿಂತ ಕೆಳಗಿರುವವರಿಗೆ, ವಸತಿ ರಹಿತರ ಹಿತ ಕಾಯಲು ಸಕರ್ಾರ ರೂಪಿಸಿರುವ ವಾಜಪೇಯಿ ವಸತಿ ಆವಾಸ್ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ಭಾಗ್ಯನಗರ ಪಟ್ಟಣ ಪಂಚಾಯತ ಮಾಜಿ ಅಧ್ಯಕ್ಷೆ ದೇವಮ್ಮ ಮಾಲಗಿತ್ತಿ ಹೇಳಿದರು.
ಪಟ್ಟಣ ಪಂಚಾಯತ ಕಾಯರ್ಾಲಯದಲ್ಲಿ 16ನೇ ವಾಡರ್ಿನ ವಾಜಪೇಯಿ ವಸತಿ ಆವಾಸ್ ಯೋಜನೆಯ 20 ಫಲಾನುಭವಿಗಳಿಗೆ ಕಾಯರ್ಾದೇಶ ನೀಡಿ ಮಾತನಾಡಿದರು. ಆವಾಸ್ ಯೋಜನೆಯು ವಸತಿರಹಿತರಿಗೆ ಸೂರು ಕಲ್ಪಿಸುವುದರೊಂದಿಗೆ ಅವರಲ್ಲಿ ಚೈತನ್ಯ ತುಂಬಿ ಸಾವಲಂಬಿಗಳಾಗಿ ಬದುಕುವಂತೆ ಆತ್ಮಸ್ಥೈರ್ಯ ತಂದುಕೊಡುತ್ತದೆ ಎಂದರು.
ಮುಖ್ಯಾಧಿಕಾರಿಗಳಾದ ಬಿ.ಬಾಬು ಮಾತನಾಡಿ ಪಟ್ಟಣದ ಸ್ವಚ್ಛತೆಗೆ ಸಾರ್ವಜನಿಕರು ಸಹಕರಿಸಬೇಕು. ಪ್ರತಿವಾಡರ್ಿನಲ್ಲಿರುವ ಯುವಕ-ಯುವತಿ ಮಂಡಳಿಯ ಪದಾಧಿಕಾರಿಗಳು ಜನಜಾಗೃತಿ ಮೂಡಿಸುವಲ್ಲಿ ಶ್ರಮವಹಿಸಲು ಅಗತ್ಯ ನೆರವು ನೀಡಲು ಪಟ್ಟಣ ಪಂಚಾಯತ ಸಿದ್ದವಿದೆ ಎಂದರು.
ಕಾರ್ಯಕ್ರಮದಲ್ಲಿ ಸಿಬ್ಬಂದಿಗಳಾದ ಮಂಗಳಾ ಕುಲಕಣರ್ಿ, ಮಹಾದೇವಿ ಬಣಗಾರ, ಫಲಾನುಭವಿಗಳಾದ ಶಾಂತಮ್ಮ ಮೇಟಿ, ಸರೋಜಮ್ಮ ಅಂಗಡಿ, ಶಾರಮ್ಮ ಅಳವಂಡಿ, ಗವಿಸಿದ್ದಮ್ಮ ಪಲ್ಲೇದ, ಶೋಭಾ ಪಾಟೀಲ, ಬಿಜೆಪಿ ಜಿಲ್ಲಾ ಮಾಧ್ಯಮ ವಕ್ತಾರ ಬಿ.ಗಿರೀಶಾನಂದ ಜ್ಞಾನಸುಂದರ, ಮುಖಂಡ ಜಗದೀಶ ಮಾಲಗಿತ್ತಿ ಹಾಗೂ ಅನೇಕರು ಭಾಗವಹಿಸಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 