ವೇಣುಗೋಪಾಲಗೆ ರಾಜ್ಯದ ರಾಜಕೀಯ ಗೊತ್ತಿಲ್ಲ
ಕಲಬುರಗಿ 14: ಲೋಕಸಭಾ ಚುನಾವಣೆ ಫಲಿತಾಂಶದ ನಂತರ ರಾಜ್ಯ ರಾಜಕೀಯದಲ್ಲಿ ಏನು ಬೇಕಾದರೂ ನಡೆಯಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫಲಿತಾಂಶದ ನಂತರ ಬಿಜೆಪಿಯ ಹಲವು ಶಾಸಕರು, ಕಾಂಗ್ರೆಸ್ ಗೆ ಬರಲಿದ್ದಾರೆ ಎಂಬ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ ಸಿ ವೇಣುಗೋಪಾಲ್ ಹೇಳಿಕೆ ಅರ್ಥವಿಲ್ಲದ್ದು. ಅವರಿಗೆ ರಾಜ್ಯ ರಾಜಕಾ ರಣದ ವಿಚಾರವೇ ಸರಿಯಾಗಿ ಗೊತ್ತಿಲ್ಲ. ಕಾಂಗ್ರೆಸ್ ಗೆ ಹೋಗಲು ಬಿಜೆಪಿ ಶಾಸಕರಿಗೆ ತಲೆಕೆಟ್ಟಿದೆಯೇ? ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭೆ ಉಪಚುನಾವಣೆಯ ನಂತರ ರಾಜ್ಯ ರಾಜಕೀಯದಲ್ಲಿ ಬದಲಾವಣೆಗಳಾಗಿ ಬಿಜೆಪಿ ಸಕರ್ಾರ ಮಾಡುವಂತಹ ಅವಕಾಶ ಇರುವಾಗ ನಮ್ಮ ಶಾಸಕರು ಏಕೆ ಬೇರೆ ಪಕ್ಷಕ್ಕೆ ಹೋಗುತ್ತಾರೆ? ಇದೆಲ್ಲಾ ಅರ್ಥವಿಲ್ಲದ ವ್ಯರ್ಥ ಪ್ರಲಾಪ ಎಂದರು.
ಇದೇ 21 ರಂದು ಬರಗಾಲದ ಪರಿಸ್ಥಿತಿ ಕುರಿತು ಚಚರ್ೆ ಮಾಡಲು ಪಕ್ಷದ ಎಲ್ಲ ಶಾಸಕರ ಸಭೆಯನ್ನು ಬೆಂಗಳೂರಿನಲ್ಲಿ ಕರೆಯಲಾಗಿದೆ ಎಂದು ಯಡಿಯೂರಪ್ಪ ಹೇಳಿದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 