ವಿಜಯಪುರ: ಕೆಬಿಜೆಎನ್ಎಲ್ ಅಧಿಕಾರಿಗಳ ನಿರ್ಲಕ್ಷ್ಯ ಮನೆಗಳಿಗೆ ನುಗ್ಗಿದ ಕಾಲುವೆ ನೀರು
ಲೋಕದರ್ಶನ ವರದಿ
ವಿಜಯಪುರ 16: ಕೆಬಿಜೆಎನ್ಎಲ್ ಅಧಿಕಾರಿಗಳ ಎಡವಟ್ಟಿನಿಂದ 16ನೇ ವಿತರಣೆ ಕಾಲುವೆಯಲ್ಲಿ ಹರಿಯಬೇಕಿದ್ದ ನೀರು ಬೆಳಗ್ಗೆ ಪಟ್ಟಣದ ಇಳಿಜಾರು ಪ್ರದೇಶದಲ್ಲಿರುವ ಬಸವನಗರದ ಹಲವಾರು ಸಾರ್ವಜನಿಕರ ಮನೆಗಳಿಗೆ ನುಗ್ಗಿದೆ.
ಕೆಲ ದಿನಗಳ ಹಿಂದೆ ಕೃಷ್ಣಾ ಎಡದಂಡೆ ಕಾಲುವೆಯಿಂದ ಆಲಮಟ್ಟಿ ಅಣೆಕಟ್ಟೆಗೆ ನೀರು ಹರಿಸಲಾಗಿತ್ತು. ಆದರೆ ಕಾಲುವೆಯಲ್ಲಿ ಹೂಳು ತುಂಬಿದ ಪರಿಣಾಮ ನೀರು ಮನೆಗಳತ್ತ ಧಾವಿಸಿ ಪೋಲಾಗುತ್ತಿರುವುದಕ್ಕೆ ಹಾಗೂ ಕಾಲುವೆ ದುರಸ್ತಿ ಮಾಡಲು ನಿರ್ಲಕ್ಷೃ ತೋರಿದ ಕೆಬಿಜೆಎನ್ಎಲ್ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕಾಲುವೆ ನೀರಿನ ಸಮಸ್ಯೆ ಕುರಿತು ಹಲವಾರು ಬಾರಿ ಕೆಬಿಜೆಎನ್ಎಲ್ ಹಾಗೂ ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ಲಿಖಿತ ರೂಪದಲ್ಲಿ ಮನವಿ ಮಾಡಿದ್ದರೂ ನಿರ್ಲಕ್ಷೃ ಮಾಡಿದ್ದಾರೆ. ಅಧಿಕಾರಿಗಳು ಇದೇ ರೀತಿ ಬೇಜವಾಬ್ದಾರಿ ಮುಂದುವರಿಸಿದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಡಿಎಸ್ಎಸ್ ಸಂಚಾಲಕ ಜೈಭೀಮ ನಾಯ್ಕೋಡಿ ಎಚ್ಚರಿಸಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 