ವಿಜಯಪುರ: ಅಂಗವಿಕಲ ಮಗುವನ್ನು ಕೊಂದ ತಂದೆ
ಲೋಕದರ್ಶನ ವರದಿ
ವಿಜಯಪುರ 19: ಬೆಂಗಳೂರಿನ ಕೆಂಪೇಗೌಡ ನಗರದಲ್ಲಿ, ವೈದ್ಯಕೀಯ ವೆಚ್ಚ ಭರಿಸಲಾಗದೆ ತನ್ನ ಐದು ವರ್ಷದ ಅನಾರೋಗ್ಯ ಪೀಡಿತ ಅಂಗವಿಕಲ ಮಗನನ್ನು ಸುಪಾರಿ ನೀಡಿ ಕೊಲೆ ಮಾಡಿಸಿದ ತಂದೆಯ ದೌರ್ಜನ್ಯವನ್ನು, ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ರಾಜ್ಯ ಸಮಿತಿ ಸದಸ್ಯರು ಹಾಗೂ ವಿಕಲಚೇತನರ ಹೋರಾಟಗಾರರಾದ ಭೀಮನಗೌಡ ಬಿ ಪಾಟೀಲ್ (ಸಾಸನೂರ) ಅವರು ತೀವ್ರವಾಗಿ ಖಂಡಿಸಿದ್ದಾರೆ.
ಅಂಗವಿಕಲರು ಎಂದು ದೂಷಿಸಬೇಡಿ, ಅವರಿಗೂ ಸಮಾಜದಲ್ಲಿ ಒಂದು ಬೆಲೆಯಿದೆ. ಅವರಿಗೂ ಎಲ್ಲರಂತೆ ಬದುಕುವ ಸ್ವಾತಂತ್ರ್ಯವಿದೆ, ಅಂಗವಿಕಲತೆ ದೇಹಕ್ಕೆ ಇರಬಹುದು, ಆದರೆ ಅವರ ಬುದ್ದಿಮತ್ತೆಗೆ ಅಲ್ಲ. ಅಂಗವಿಕಲರು ಎಲ್ಲ ರಂಗಗಳಲ್ಲಿಯೂ ಸಾಧನೆ ಮಾಡಿದ ಸಾವಿರಾರು ನಿದರ್ಶನಗಳಿವೆ.
ಏನೂ ಅರಿಯದ 5 ವರ್ಷದ ಮಾತನಾಡಲು ಹಾಗೂ ನಡೆದಾಡಲು ಬಾರದ ಅಂಗವಿಕಲ ಬಾಲಕ ಬಸವರಾಜುಗೆ ಸುಪಾರಿ ನೀಡಿ ಕೊಲೆ ಮಾಡಿಸುವ ತಂದೆಯ ಆಲೋಚನೆ ಎಷ್ಟರ ಮಟ್ಟಿಗೆ ಸರಿ? ಎಂದು ಅವರು ಪ್ರಶ್ನಿಸಿದ್ದಾರೆ. ಸುಪಾರಿ ಕೊಟ್ಟ ಆರೋಪಿ ತಂದೆ ಜಯಪ್ಪ ಮತ್ತು ಕೊಲೆ ಮಾಡಿದ ರೌಡಿ ಮಹೇಶ್ಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 