ವಿಶ್ವಾಸ ಮೋಘೆ ದೈವಾಧೀನ
Vishwas Moghe Daivadhina
ವಿಶ್ವಾಸ ಮೋಘೆ ದೈವಾಧೀನ
ಕಾರವಾರ 03: ತಾಲೂಕಿನ ಶೇಜವಾಡದ ಶ್ರೀ ಶೆಜ್ಜೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾಗಿದ್ದ ವಿಶ್ವಾಸ ಮೋಘೆ (75) ಅವರು ಸೋಮವಾರ ಬೆಳಿಗ್ಗೆ ದೈವಾಧೀನರಾದರು.
ಶ್ರೀ ಶೆಜ್ಜೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿದ್ದ ಇವರು ಪೌರೋಹಿತ್ಯ ಸೇರಿದಂತೆ ಹಲವಾರು ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುತ್ತಿದ್ದು ವಿಶ್ವಾಸ ಭಟ್ ಎಂದೇ ಪರಿಚಿತರಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ವಿಶ್ವಾಸ ಭಟ್ಟರ ಅಗಲುವಿಕೆಗೆ ಶಾಸಕ ಸತೀಶ ಸೈಲ್, ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಮಾಜಿ ಶಾಸಕಿ ರೂಪಾಲಿ ನಾಯ್ಕ, ಶಿರವಾಡ ಗ್ರಾಪಂ ಅಧ್ಯಕ್ಷೆ ಅಶ್ವಿನಿ ಬಾಂದೇಕರ, ಉಪಾಧ್ಯಕ್ಷ ದೀಲೀಪ ನಾಯ್ಕ, ಸರ್ವ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಮೀರ ನಾಯ್ಕ, ಶ್ರೀ ಶೆಜ್ಜೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ಸೇರಿದಂತೆ ಎಲ್ಲ ಸದಸ್ಯರು, ಎಲ್ಲಾ ವೃತ್ತಿ ವಾನರು, ದೇವಳಿ ವರ್ಗದವರು ಹಾಗೂ ಊರ ನಾಗರಿಕರು ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 