ಗ್ರಾಮೀಣ ಭಾಗದಲ್ಲಿ ಸರ್ಕಾರಿ ವೈದ್ಯ ಕಾಲೇಜು ಸ್ಥಾಪನೆಗೆ ಧ್ವನಿ: ಮೆಚ್ಚುಗೆ
Vote for establishment of government medical college in rural areas: Appreciation
ಆಲಮೇಲ 14: ವಿಜಯಪುರ ನಗರದಲ್ಲಿ ಸುಮಾರು ದಿನಗಳಿಂದ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ನಡೆಯುತ್ತಿರುವ ಹೋರಾಟದ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆಯುವಲ್ಲಿ ಸಿಂದಗಿ ಶಾಸಕ ಅಶೋಕ ಮನಗೂಳಿ ನಡೆಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ ಅದನ್ನು ನಾವು ಸ್ವಾಗತಿಸುತ್ತೇವೆ ಎಂದು ಪ.ಪಂ ಅಧ್ಯಕ್ಷ ಸಾದೀಕ ಸುಂಬಡ ಪ್ರಸಂಶೆ ವ್ಯಕ್ತಪಡಿಸಿದ್ದಾರೆ.
ಈ ಭಾಗದಲ್ಲಿ ಹೆಚ್ಚು ಬಡ ವಿದ್ಯಾರ್ಥಿಗಳಿದ್ದಾರೆ. ಅವರ ಅನುಕೂಲಕ್ಕೆ ಜಿಲ್ಲೆಯಲ್ಲಿ ಒಂದು ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾಗಬೇಕು ಎನ್ನುವ ಕೂಗು ಬಹು ದಿನಗಳಿಂದ ಕೂಡಿದೆ. ವಿಜಯಪುರ ನಗರದಲ್ಲಿ ಬಿಟ್ಟು ಬೇರೆ ತಾಲೂಕು ಕೇಂದ್ರಗಳಾದ ಸಿಂದಗಿ - ಇಂಡಿ ಅಥವಾ ಸಿಂದಗಿ ದೇವರ ಹಿಪ್ಪರಗಿ ಮಧ್ಯ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಗೆ ಸರ್ಕಾರ ದಿಟ್ಟ ಹೆಜ್ಜೆ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಹಾಗೂ ಸಿಂದಗಿ ಇಂಡಿ ತಾಲೂಕಿಲ್ಲಿ ಬಹುತೇಕ ಕಬ್ಬು ಬೆಳೆಗಾರರು ಹೆಚ್ಚಿದ್ದು ಆ ರೈತರ ಜಮೀನುಗಳಿಗೆ ಸೂಕ್ತ ದಾರಿ ಇಲ್ಲ, ಆದಷ್ಟು ಬೇಗನೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಹೋರಾಟಗಾರರ ಹೋರಾಟದ ಧ್ವನಿಯಾಗಿ ಶಾಸಕ ಅಶೋಕ ಮನಗೂಳಿ ಸದನದಲ್ಲಿ ವ್ಯಾಖ್ಯಾನಿಸಿದ್ದು ಶ್ಲಾಘನೀಯವಾಗಿದೆ ಎಂದು ಪ.ಪಂ. ಅಧ್ಯಕ್ಷ, ಆಲಮೇಲ ಬ್ಲಾಕ ಕಾಂಗ್ರೆಸ್ ಅಧ್ಯಕ್ಷ ಸಾದೀಕ ಸುಂಬಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 