ಹಿಡಕಲ್ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ
ಲೋಕದರ್ಶನ ವರದಿ
ಬೆಳಗಾವಿ, 20: 94 ಕಿ.ಮೀ. ದೂರದಲ್ಲಿರವ ಕೃಷ್ನಾ ನದಿಗೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡ್ಕಲ್ ಜಲಾಶಯದಿಂದ ಒಂದು ಟಿ.ಎಂ.ಸಿ. ಹರಿಸುವ ಜಲಸಂಪನ್ಮೂಲ ಖಾತೆಯ ಸಚಿವ ಡಿ.ಕೆ ಶಿವಕುಮಾರ ಮತ್ತು ಪ್ರಾದೇಶಿಕ ಆಯುಕ್ತ ತುಷಾರ್ ಗಿರಿನಾಥ ಅವರ ನಿಧರ್ಾರದಂತೆ ಇಂದು ಸೋಮವಾರ ಮುಂಜಾನೆ 8 ಗಂಟೆಗೆ ಹಿಡ್ಕಲ್ ಜಲಾಶಯದಿಂದ ಮೂರು ಸಾವಿರ ಕ್ಯೂಸೆಕ್ಸ ನೀರನ್ನು ಬಿಡುಗಡೆ ಮಾಡಲಾಯಿತು.
ನಾಳೆ ಮಂಗಳವಾರ ಮುಂಜಾನೆಯಿಂದ ನಿತ್ಯ ಒಂದು ಸಾವಿರ ಕ್ಯೂಸೆಕ್ಸ ನೀರನ್ನು ಬಿಡುಗಡೆ ಮಾಡಲಾಗುವದು. ಜ
ಲಾಶಯದಲ್ಲಿ ಸದ್ಯ 4 ಟಿ.ಎಂ.ಸಿ. ನೀರಿನ ಸಂಗ್ರಹವಿದ್ದು ಒಂದು ಟಿ.ಎಂ.ಸಿ. ನೀರನ್ನು ಕೃಷ್ಣಾ ನದಿಗೆ ಬಿಡಲಾಗುತ್ತಿದೆ. ಧೂಪದಾಳ ವೇರ್ ಭತರ್ಿಯಾದ ನಂತರ ಅಲ್ಲಿಂದ ಮುಗಳಖೋಡ ಚೌಕಿಯವರೆಗಿನ 50 ಕಿ.ಮೀ. ದೂರವನ್ನು ಮುಖ್ಯ ಕಾಲುವೆ ಮೂಲಕ ನೀರು ಸಾಗಬೇಕು. ಅಲ್ಲಿಂದ ಅಥಣಿ ತಾಲೂಕಿನ ಶೇಗುಣಸಿವರೆಗಿನ 22 ಕಿ.ಮೀ. ಕಾಲುವೆಯಲ್ಲಿ ಸಾಗಿ ಹಿರೇಹಳ್ಳದ ಮೂಲಕ ಈ ನೀರು ಕೃಷ್ಣಾ ತಟವನ್ನು ಸೇರಬೇಕಾಗಿದೆ. ಆದರೆ ಒಂದು ಟಿ.ಎಂ.ಸಿ. ನೀರು 94 ಕಿ.ಮೀ. ದೂರವನ್ನು ಕ್ರಮಿಸಿ ಕೃಷ್ಣಾ ತಟವನ್ನು ಸೇರುವದು ಕಷ್ಟ ಸಾಧ್ಯವೆಂದು ಅನೇಕ ನೀರಾವರಿ ಅಧಿಕಾರಿಗಳು ಅಭಿಪ್ರಾಯಪಡುತಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 