ಎಲ್ಲರೂ ಒಗ್ಗೂಡಿ ಸರ್ಕಾರದ ಕಾರ್ಯಕ್ರಮ ಜಾರಿಗೊಳಿಸುತ್ತೇವೆ: ಸಚಿವ ಬಸವರಾಜ ರಾಯರಡ್ಡಿ
We will all work together to implement the government's program: Minister Basavaraj Rayareddy
ಕೊಪ್ಪಳ, ಆ.6: ಜಿಲ್ಲೆಯಲ್ಲಿ ಸಚಿವರು, ಶಾಸಕರು ಹಾಗೂ ಪಕ್ಷದ ಎಲ್ಲಾ ಹಿರಿಯ-ಕಿರಿಯ ಮುಖಂಡರು ಪರಸ್ಪರ ಸಹಕಾರದಿಂದ ಒಗ್ಗೂಡಿ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುವುದು ಎಂದು ರಾಜ್ಯ ಸಚಿವ ಸಂಪುಟ ದರ್ಜೆ ಸಚಿವ ಬಸವರಾಜ ರಾಯರಡ್ಡಿ ಹೇಳಿದರು.
ಗುರುವಾರ ಕೊಪ್ಪಳದ ನೀರೀಕ್ಷಣಾ ಮಂದಿರದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಜನರು ತಮ್ಮ ಮೇಲೆ ಅಪಾರ ನೀರೀಕ್ಷೆ ಇಟ್ಟಿದ್ದು, ಅದಕ್ಕೆ ತಕ್ಕಂತೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವ ಸಂಕಲ್ಪ ಹೊಂದಿದ್ದೇನೆ ಎಂದು ತಿಳಿಸಿದರು.
ಹೊಸದಾಗಿ ಸಚಿವ ಸಂಪುಟಕ್ಕೆ ಸೇರೆ್ಡಯಾದ ಸಚಿವರಿಗೆ ವಿಧಾನಸೌಧ ಹಾಗೂ ವಿಕಾಸಸೌಧದಲ್ಲಿ ಕೊಠಡಿಗಳನ್ನು ಹಂಚಿಕೆ ಮಾಡಲಾಗಿದೆ. ಸೋಮವಾರದಿಂದ ಎಲ್ಲ ಸಚಿವರು ತಮ್ಮ ಕಚೇರಿಗಳಲ್ಲಿ ಕಾರ್ಯಾರಂಭ ಮಾಡಲಿದ್ದು, ಸರ್ಕಾರದ ಯೋಜನೆಗಳ ಅನುಷ್ಠಾನಕ್ಕೆ ಇನ್ನಷ್ಟು ವೇಗ ಸಿಗಲಿದೆ ಎಂದು ಹೇಳಿದರು.
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ 