ಕಾನೂನು ರಕ್ಷಣೆಗಾಗಿ ಶ್ರಮಿಸುವೆ,ಬಳ್ಳಾರಿ ಗ್ರಾಮೀಣ ಸಿಪಿಐ ಸ್ಪಷ್ಟನೆ
Will work for legal protection, explains Bellary Rural CPI
ಬಳ್ಳಾರಿ 07: ರಂದು ಮೇಲಾಧಿಕಾರಿಗಳ ಆದೇಶಗಳನ್ನು ಕಟ್ಟು ನಿಟ್ಟಾಗಿ ಪಾಲಿಸುತ್ತಾ, ನಮ್ಮ ಸಿಬ್ಬಂದಿ ಸಹಾಯ ಸಹಕಾರಗಳಿಂದ ಮುಂದಿನ ದಿನಗಳಲ್ಲಿ ಕಾನೂನು ರಕ್ಷಣೆಗಾಗಿ ಶ್ರಮಿಸುತ್ತೇನೆ ಎಂದು, ಬಳ್ಳಾರಿ ಗ್ರಾಮೀಣ ಪೊಲೀಸ್ ಸ್ಟೇಷನ್ ಸರ್ಕಲ್ ಇನ್ಸ್ಪೆಕ್ಟರ್ ಆಗಿ ವರ್ಗಾವಣೆ ಆಗಿಬಂದ ಉದಯ ರವಿ ಅವರು ಹೇಳಿದರು. ಶುಕ್ರವಾರ ತಮ್ಮ ಕಚೇರಿಯಲ್ಲಿ ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಇಷ್ಟರವರೆಗೂ ಕೆಲಸ ಮಾಡಿರುವ ಹಲವಾರು ಸ್ಟೇಷನ್ಗಳಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಾ ಅಲ್ಲಿನ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಾ ಕಾರ್ಯನಿರ್ವಹಿಸಿದ್ದೇನೆ, ಅದೇ ರೀತಿಯಾಗಿ ಇಲ್ಲಿ ಕೂಡ ಮೇಲಾಧಿಕಾರಿಗಳ ಆದೇಶಗಳನ್ನು ಪಾಲಿಸುವುದರ ಜೊತೆಗೆ, ಜನರ ಸಮಸ್ಯೆಗಳ ಪರಿಷ್ಕಾರ ಮತ್ತು ಶಾಂತಿ ಭದ್ರತೆ ಗಾಗಿ ಕಾರ್ಯನಿರ್ವಹಿಸುತ್ತೇನೆ ಎಂದು ತಿಳಿಸಿದರು. ಬಳ್ಳಾರಿ ಗ್ರಾಮೀಣ ಭಾಗ ಸ್ಟೇಷನ್ ವ್ಯಾಪ್ತಿಯಲ್ಲಿ ಬರುವ ಜನರು ಯಾವುದೇ ತಮ್ಮ ಸಮಸ್ಯೆ ಇದ್ದರೂ ನನ್ನನ್ನು ನೇರವಾಗಿ ಸಂಪರ್ಕಿಸಬಹುದು ಎಂದು ಸ್ಪಷ್ಟನೆ ನೀಡಿದರು. ಈ ಭಾಗದಲ್ಲಿ ಇರುವ ಹಲವಾರು ಕಾನೂನು ಬಾಹಿರ ಚಟುವಟಿಕೆಗಳು ಸಮಸ್ಯೆಗಳ ಪರಿಷ್ಕಾರಕ್ಕಾಗಿ ಹೇಗೆ ಸ್ಪಂದಿಸುತ್ತೀರಿ ಎಂದು ಮಾಧ್ಯಮದವರು ಕೇಳಿದಾಗ, ಸಿಪಿಐ ಉದಯ ರವಿಯವರು ಉತ್ತರಿಸುತ್ತ ಜನರ ಸಮಸ್ಯೆಗಳನ್ನು ಬಗೆಹರಿಸುವುದರ ಜೊತೆಗೆ, ಕಾನೂನು ಬಾಹಿರ ಚಟುವಟಿಕೆಗಳು ಕಂಡು ಬಂದಲ್ಲಿ ಅವರು ಯಾರೇ ಆಗಲಿ ಕಾನೂನು ಚೌಕೋಟಿನ ನಿಯಮದಡಿಯಲ್ಲಿ ಕ್ರಮ ವಹಿಸಿಕೊಳ್ಳಲಾಗುವುದು. ಹಾಗೂ ಅಮಾಯಕ ಜನರ ಮಾನ ಪ್ರಾಣಗಳಿಗೆ ರಕ್ಷಣೆ ನೀಡುತ್ತೇನೆ ಈ ಠಾಣಾ ವ್ಯಾಪ್ತಿಯ ಜನರು ನಮಗೆ ಸರಿಯಾಗಿ ಸ್ಪಂದಿಸಿ ಮಾಹಿತಿ ನೀಡಿದಲ್ಲಿ ಜಿಲ್ಲೆಯ ಎಸ್ಪಿ ರವರ ಆದೇಶದ ಅನುಗುಣವಾಗಿ ಕಾನೂನಾತ್ಮಕವಾಗಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಲೋಕದರ್ಶನ ಪತ್ರಿಕೆ ವರದಿಗಾರರ ಜೊತೆಗೆ ಮಾತನಾಡಿದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 