ಕಾನೂನು ರಕ್ಷಣೆಗಾಗಿ ಶ್ರಮಿಸುವೆ,ಬಳ್ಳಾರಿ ಗ್ರಾಮೀಣ ಸಿಪಿಐ ಸ್ಪಷ್ಟನೆ
Will work for legal protection, explains Bellary Rural CPI
ಬಳ್ಳಾರಿ 07: ರಂದು ಮೇಲಾಧಿಕಾರಿಗಳ ಆದೇಶಗಳನ್ನು ಕಟ್ಟು ನಿಟ್ಟಾಗಿ ಪಾಲಿಸುತ್ತಾ, ನಮ್ಮ ಸಿಬ್ಬಂದಿ ಸಹಾಯ ಸಹಕಾರಗಳಿಂದ ಮುಂದಿನ ದಿನಗಳಲ್ಲಿ ಕಾನೂನು ರಕ್ಷಣೆಗಾಗಿ ಶ್ರಮಿಸುತ್ತೇನೆ ಎಂದು, ಬಳ್ಳಾರಿ ಗ್ರಾಮೀಣ ಪೊಲೀಸ್ ಸ್ಟೇಷನ್ ಸರ್ಕಲ್ ಇನ್ಸ್ಪೆಕ್ಟರ್ ಆಗಿ ವರ್ಗಾವಣೆ ಆಗಿಬಂದ ಉದಯ ರವಿ ಅವರು ಹೇಳಿದರು. ಶುಕ್ರವಾರ ತಮ್ಮ ಕಚೇರಿಯಲ್ಲಿ ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಇಷ್ಟರವರೆಗೂ ಕೆಲಸ ಮಾಡಿರುವ ಹಲವಾರು ಸ್ಟೇಷನ್ಗಳಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಾ ಅಲ್ಲಿನ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಾ ಕಾರ್ಯನಿರ್ವಹಿಸಿದ್ದೇನೆ, ಅದೇ ರೀತಿಯಾಗಿ ಇಲ್ಲಿ ಕೂಡ ಮೇಲಾಧಿಕಾರಿಗಳ ಆದೇಶಗಳನ್ನು ಪಾಲಿಸುವುದರ ಜೊತೆಗೆ, ಜನರ ಸಮಸ್ಯೆಗಳ ಪರಿಷ್ಕಾರ ಮತ್ತು ಶಾಂತಿ ಭದ್ರತೆ ಗಾಗಿ ಕಾರ್ಯನಿರ್ವಹಿಸುತ್ತೇನೆ ಎಂದು ತಿಳಿಸಿದರು. ಬಳ್ಳಾರಿ ಗ್ರಾಮೀಣ ಭಾಗ ಸ್ಟೇಷನ್ ವ್ಯಾಪ್ತಿಯಲ್ಲಿ ಬರುವ ಜನರು ಯಾವುದೇ ತಮ್ಮ ಸಮಸ್ಯೆ ಇದ್ದರೂ ನನ್ನನ್ನು ನೇರವಾಗಿ ಸಂಪರ್ಕಿಸಬಹುದು ಎಂದು ಸ್ಪಷ್ಟನೆ ನೀಡಿದರು. ಈ ಭಾಗದಲ್ಲಿ ಇರುವ ಹಲವಾರು ಕಾನೂನು ಬಾಹಿರ ಚಟುವಟಿಕೆಗಳು ಸಮಸ್ಯೆಗಳ ಪರಿಷ್ಕಾರಕ್ಕಾಗಿ ಹೇಗೆ ಸ್ಪಂದಿಸುತ್ತೀರಿ ಎಂದು ಮಾಧ್ಯಮದವರು ಕೇಳಿದಾಗ, ಸಿಪಿಐ ಉದಯ ರವಿಯವರು ಉತ್ತರಿಸುತ್ತ ಜನರ ಸಮಸ್ಯೆಗಳನ್ನು ಬಗೆಹರಿಸುವುದರ ಜೊತೆಗೆ, ಕಾನೂನು ಬಾಹಿರ ಚಟುವಟಿಕೆಗಳು ಕಂಡು ಬಂದಲ್ಲಿ ಅವರು ಯಾರೇ ಆಗಲಿ ಕಾನೂನು ಚೌಕೋಟಿನ ನಿಯಮದಡಿಯಲ್ಲಿ ಕ್ರಮ ವಹಿಸಿಕೊಳ್ಳಲಾಗುವುದು. ಹಾಗೂ ಅಮಾಯಕ ಜನರ ಮಾನ ಪ್ರಾಣಗಳಿಗೆ ರಕ್ಷಣೆ ನೀಡುತ್ತೇನೆ ಈ ಠಾಣಾ ವ್ಯಾಪ್ತಿಯ ಜನರು ನಮಗೆ ಸರಿಯಾಗಿ ಸ್ಪಂದಿಸಿ ಮಾಹಿತಿ ನೀಡಿದಲ್ಲಿ ಜಿಲ್ಲೆಯ ಎಸ್ಪಿ ರವರ ಆದೇಶದ ಅನುಗುಣವಾಗಿ ಕಾನೂನಾತ್ಮಕವಾಗಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಲೋಕದರ್ಶನ ಪತ್ರಿಕೆ ವರದಿಗಾರರ ಜೊತೆಗೆ ಮಾತನಾಡಿದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 