ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ತ್ರಿವಳಿ ತಲಾಖ್ ಮಸೂದೆಗಳಿಗೆ ಕೈಜೋಡಿಸಿ'
ಹೊಸದಿಲ್ಲಿ : ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದಿರುವ ಪತ್ರಕ್ಕೆ ಸ್ಪಂದಿಸಿರುವ ಕಾನೂನು ಸಚಿವ ರವಿ ಶಂಕರ್ ಪ್ರಸಾದ್ ಅವರು ಮಹಿಳೆಯರಿಗೆ ನೆರವಾಗುವ ನಿಟ್ಟಿನಲ್ಲಿ "ಹೊಸ ಡೀಲ್ ಕೊಡುಗೆಯನ್ನುನೀಡುವಂತೆ ರಾಹುಲ್ ಗಾಂಧಿ ಅವರನ್ನು ಆಹ್ವಾನಿಸಿದ್ದಾರೆ.
ಈ ಹೊಸ ಡೀಲ್ನ ಭಾಗವಾಗಿ ನಾವು ಸಂಸತ್ತಿನ ಎರಡೂ ಸದನದಲ್ಲಿ ಮಹಿಳಾ ಮೀಸಲಾತಿ ಮಸೂದೆ, ತ್ರಿವಳಿ ತಲಾಕ್ ನಿಷೇಧಿಸುವ ಕಾನೂನು ಮತ್ತು ನಿಕಾಹ್ ಹಲಾಲಾ ನಿಷೇಧಿಸುವ ಕಾನೂನಿಗೆ ಅನುಮೋದನೆ ನೀಡಲು ಸಾಧ್ಯವಾಗುವುದು ಎಂಬ ವಿಶ್ವಾಸವನ್ನು ಸಚಿವ ರವಿ ಶಂಕರ್ ಪ್ರಸಾದ್ ವ್ಯಕ್ತಪಡಿಸಿದ್ದಾರೆ.
ಮಹಿಳೆಯರಿಗೆ ಮೀಸಲು ಪ್ರಾತಿನಿಧ್ಯವನ್ನು ಕಲ್ಪಿಸುವ ಮಸೂದೆಯನ್ನು ಮೂಲತಃ ಪ್ರಸ್ತಾಪಿಸಿದ್ದು ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್ಡಿಎ ಸರಕಾರ.
ಇದನ್ನು ಹಿಂದಿನ ಯುಪಿಎ ಸರಕಾರ ಪುನರ್ ಪರಿಚಯಿಸಿದ ಸಂದರ್ಭದಲ್ಲೂ ಬಿಜೆಪಿ ಅದನ್ನು ಬೆಂಬಲಿಸಿತ್ತು ಮತ್ತು ಅದು ರಾಜ್ಯಸಭೆಯಲ್ಲಿ ಪಾಸಾಗಿತ್ತು ಎಂದು ರವಿಶಂಕರ್ ಪ್ರಸಾದ್ ಹೇಳಿದರು.
ಆದರೆ ಈ ಮಸೂದೆಯನ್ನು ಲೋಕಸಭೆಯಲ್ಲಿ ಪಾಸ್ ಮಾಡಿಸಿಕೊಳ್ಳಲು ಯುಪಿಎ ಸರಕಾರ ಸಾಕಷ್ಟು ಪ್ರಯತ್ನಗಳನ್ನು ಮಾಡಲಿಲ್ಲ ಎಂದು ಸಚಿವ ರವಿ ಶಂಕರ್ ಪ್ರಸಾದ್ ಆರೋಪಿಸಿದರು.
ರಾಹುಲ್ ಗಾಂಧಿ ಅವರು ಈ ಮಸೂದೆಯನ್ನು ಬೆಂಬಲಿಸುವ ಉಮೇದು ತೋರಿಸುವುದನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರಕಾರ ಸ್ವಾಗತಿಸುತ್ತದೆ;
ಆದರೆ ಮೂರು ವರ್ಷಗಳ ಹಿಂದೆ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಈ ಮಸೂದೆಯನ್ನು ಯಾಕೆ ಕೈಗೆತ್ತಿಕೊಳ್ಳಲಿಲ್ಲ ಎಂಬುದನ್ನು ಕೂಡ ಇದೇ ವೇಳೆ ತಿಳಿಯಬಯಸುತ್ತದೆ ಎಂದು ಹೇಳಿದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 