ಯಲುಬುರ್ಗ: ಪೋಲಿಸ್ ಇಲಾಖೆ ಉತ್ತಮ ಕಾರ್ಯ ಮಾಡುತ್ತಿದೆ: ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ರೇಣುಕಾ ಹೇಳಿಕೆ
ಲೋಕದರ್ಶನ ವರದಿ
ಯಲುಬುರ್ಗ 19: ಜಿಲ್ಲೆಯಲ್ಲಿ ಪೋಲಿಸ್ ಇಲಾಖೆ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದು ಇವರ ಕಾರ್ಯ ತೃಪ್ತಿ ತಂದಿದೆ ಚುನಾವಣೆಯನ್ನು ಶಾಂತಿಯುತವಾಗಿ ನಡೆಸಲು ಎಲ್ಲಾ ಮುಂಜಾಗೃತ ಕ್ರಮಗಳನ್ನ ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ರೇಣುಕಾ ಸುಕುಮಾರ ಹೇಳಿದರು.
ನಗರದ ಪೋಲಿಸ್ ಠಾಣೆಗೆ ಬೇಟಿ ನೀಡಿ ಪರಿಶಿಲನೆ ಮಾಡಿ ಅವರು ಮಾತನಾಡಿದರು. ಪೋಲಿಸರ ಕುಟುಂಬಗಳಿಗಿರಿರುವ ಸಮಸ್ಯೆಗಳನ್ನ ಆಲಿಸಿದ ಅವರು ಇಲಾಖೆಯ ಸಿಬ್ಬಂದಿಗಳು ಹಾಗೂ ಕುಟುಂಬದವರನ್ನು ಬೇಟಿ ಮಾಡಿ ಮಾತನಾಡಿದರು ಹಾಗೂ ಪೋಲಿಸ್ ಸಿಬ್ಬಂದಿಯ ಮಕ್ಕಳಿಗೆ ಗುಲಾಬಿ ಹೂ ನೀಡುವ ಮೂಲಕ ಮಕ್ಕಳೊಂದಿಗೆ ಬೆರೆತು ಮಕ್ಕಳ ಆಟ ಪಾಠದ ಬಗ್ಗೆ ವಿಚಾರಿಸಿದರು,
ಈ ಸಂದರ್ಭದಲ್ಲಿ ಸಿಪಿಐ ರಮೇಶ ರೊಟ್ಟಿ, ಪಿಎಸ್ಐ ಬಸವರಾಜ ಅಡವಿಭಾವಿ, ಆಂಜನೇಯ, ಸೇರಿದಂತೆ ಪೋಲಿಸ್ ಸಿಬ್ಬಂದಿಗಳು ಕುಟುಂಬಸ್ಥರು ಮಕ್ಕಳು ಹಾಜರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 