ಯುವಕರು ಟ್ರಾಫಿಕ್ ನಿಯಮ ಕಡ್ಡಾಯವಾಗಿ ಪಾಲಿಸಿ
ಲೋಕದರ್ಶನ ವರದಿ
ಘಟಪ್ರಭಾ 31: ಸಮಾಜದ ಆರೋಗ್ಯ ಕಾಪಾಡುವ ಜವಾಬ್ದಾರಿ ವೈದ್ಯರ ಮೇಲಿದೆ. ಯುವ ವೈದ್ಯರು ತಮ್ಮ ವೃತ್ತಿಯ ಜೊತೆಗೆ ಗ್ರಾಮೀಣ ಭಾಗದ ಜನರ ಸೇವೆಗೆ ಮುಂದಾಗಬೇಕೆಂದು ಗೋಕಾಕ ಡಿ.ವೈ.ಎಸ್.ಪಿ ಡಿ.ಟಿ.ಪ್ರಭು ಹೇಳಿದರು.
ಗುರುವಾರ ಸಂಜೆ ಸ್ಥಳೀಯ ಜೆ.ಜಿ ಸಹಕಾರಿ ಆಸ್ಪತ್ರೆಯ ಬಿ.ಆರ್.ಪಾಟೀಲ ಆಯುವರ್ೇದಿಕ ಮೆಡಿಕಲ್ ಕಾಲೇಜಿನ 19ನೇ ವಾಷರ್ಿಕ ಸಮ್ಮೇಳನ ಉದ್ಘಾಟಿಸಿ ಮಾತನಾಡುತ್ತ, ಶಿಕ್ಷಣವು ಪ್ರತಿಯೊಬ್ಬರಿಗೆ ಮುಖ್ಯವಾಗಿದೆ. ವೈದಕೀಯ ಕ್ಷೇತ್ರದ ವಿದ್ಯಾಥರ್ಿಗಳಿಗೆ ಭವಿಷ್ಯದಲ್ಲಿ ಸಾಕಷ್ಟು ಅವಕಾಶಗಳಿವೆ. ವಿದ್ಯಾಥರ್ಿಗಳು ತಮ್ಮ ಸಾಮಾಜಿಕ ಜೀವನದ ಜೊತೆಗೆ ವೃತ್ತಿ ಜೀವನದಲ್ಲಿ ಕೂಡಾ ಕಾನೂನು ಪಾಲನೆಯನ್ನು ಮಾಡಬೇಕು. ವಿದ್ಯಾವಂತ ಯುವಕರು ಟ್ರಾಫಿಕ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವದರೊಂದಿಗೆ ಸಮಾಜಕ್ಕೆ ಮಾದರಿಯಾಗಬೇಕೆಂದು ಹೆೇಳಿದರು.
ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಬಿ.ಆರ್.ಪಾಟೀಲ(ನಾಗನೂರ) ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಡಾ.ಜೆ.ಶಮರ್ಾ ಪ್ರಾಸ್ತಾವಿಕವಾಗಿ ಮಾತನಾಡಿ ವರದಿವಾಚನ ಮಾಡಿದರು. ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪಧರ್ೆಗಳಲ್ಲಿ ಭಾಗವಹಿಸಿದ ವಿದ್ಯಾಥರ್ಿಗಳಿಗೆ ಅತಿಥಿಗಳಿಂದ ಬಹುಮಾನ ವಿತರಿಸಲಾಯಿತು.
ವೇದಿಕೆ ಮೇಲೆ ಘಟಪ್ರಭಾ ಪಿ.ಎಸ್.ಐ ಹಾಲಪ್ಪ ಬಾಲದಂಡಿ, ಬೈಲಹೊಂಗಲ ಕಾಲೇಜಿನ ಪ್ರಾಂಶುಪಾಲ ಸುಭಾಸ ಬಾಗಡೆ, ಸಂಸ್ಥೆಯ ಉಪಾಧ್ಯಕ್ಷ ಎ.ಎನ್.ಕರಲಿಂಗನವರ, ನಿದರ್ೇಶಕರಾದ ಅಪ್ಪಯ್ಯಾ ಬಡಕುಂದ್ರಿ, ಚಂದ್ರಶೇಖರ ಕಾಡದವರ, ಸುರೇಶ ಕಾಡದವರ, ಆರ್.ಟಿ.ಶಿರಾಳಕರ, ಶಿವನಗೌಡಾ ಪಾಟೀಲ, ಎಸ್.ಎಂ.ಚಂದರಗಿ, ಬಿ.ಎಂ.ಬಂಡಿ, ಎಸ್.ಎಸ್.ದಳವಾಯಿ, ಆರ್.ಜೆ.ಪತ್ತಾರ, ಆಶಾದೇವಿ ಕತ್ತಿ, ಪೂಜಾ ಇನಾಮದಾರ, ಸಿಇಓ ಬಿ.ಕೆ.ಎಚ್ ಪಾಟೀಲ, ಡಾ.ಶೋಭಾ ಇಟ್ನಾಳ, ಡಾ.ಹೊಸಮಠ, ಮ್ಯಾನೇಜರ ಎಲ್.ಎಸ್.ಹಿಡಕಲ್ ಸೇರಿದಂತೆ ಸಂಸ್ಥೆಯ ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಶಿಕ್ಷಕ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 