ಯುವ ಸಮುದಾಯ ಉದ್ಯಮ ಆರಂಭಿಸಲು ಮುಂದಾಗಬೇಕು: ಸೋಮಶೇಖರ
Youth community should take initiative to start businesses: Somashekar
ಬಳ್ಳಾರಿ 29: ಯುವ ಸಮುದಾಯ ಸರ್ಕಾರದ ಯೋಜನೆಗಳನ್ನು ಪಡೆದುಕೊಂಡು ಉದ್ಯಮ ಆರಂಭಿಸುವಂತರಾಗಬೇಕು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಸೋಮಶೇಖರ ಅವರು ಹೇಳಿದರು.
ಗುರುವಾರ, ನಗರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ಆವರಣದಲ್ಲಿ ಪ್ರಧಾನಮಂತ್ರಿಗಳ ಉದ್ಯೋಗ ಸೃಷ್ಠಿ ಕಾರ್ಯಕ್ರಮದಡಿ ಹಮ್ಮಿಕೊಂಡಿದ್ದ 10 ದಿನಗಳ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ತಾಳ್ಮೆ, ಆತ್ಮವಿಶ್ವಾಸ, ಧೈರ್ಯದಿಂದ ಹೊಸ ಉದ್ಯೋಗಗಳನ್ನು ಪ್ರಾರಂಭಿಸುವ ಮೂಲಕ ಆರ್ಥಿಕವಾಗಿ ಬೆಳೆಯಬೇಕು. ಬಳಿಕ ಇತರರಿಗೂ ಉದ್ಯೋಗ ನೀಡಲು ಮುಂದಾಗಬೇಕು ಎಂದು ಮಾರ್ಗದರ್ಶನ ನೀಡಿದರು.
ಕೆನರಾ ಬ್ಯಾಂಕ್ ನ ವ್ಯವಸ್ಥಾಪಕ ಶ್ಯಾಮ್ ಅವರು ಮಾತನಾಡಿ, ಒಂದು ಉದ್ಯಮ ಸ್ಥಾಪಿಸಲು ಸಾಲ ಪಡೆದುಕೊಂಡು ಸರಿಯಾಗಿ ಮರುಪಾವತಿ ಮಾಡಿದರೆ ಇನ್ನೂ ಹೆಚ್ಚಿನ ಸಾಲ ಪಡೆದುಕೊಳ್ಳಲು ಅವಕಾಶವಿರುತ್ತದೆ ಎಂದು ತಿಳಿಸಿದರು
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕ ರಾಜೇಸಾಬ್ ಎಚ್ ಎರಿಮನಿ ಅವರು ಮಾತನಾಡಿ, ಕಾರ್ಯಕ್ಷೇತ್ರದಲ್ಲಿ ಪರಿಪೂರ್ಣತೆಯಿಂದ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.
ಈ ವೇಳೆ ಕೆಎಸ್ಐಡಿಸಿ ಎಜಿಎಂ ಮಲ್ಲಿಕಾರ್ಜುನ, ಸಂಸ್ಥೆಯ ಉಪನ್ಯಾಸಕರಾದ ಜಡೇಶ, ದಿನೇಶ ಕುಮಾರ, ಸಿದ್ದಲಿಂಗಮ್ಮ, ಸಂತೋಷ ಕುಮಾರ, ಪರಮೇಶ ಹಾಗೂ ಯಶಸ್ವಿ ಉದ್ಯಮಿಗಳು ಮತ್ತು 30 ಜನ ಶಿಬಿರಾರ್ಥಿಗಳು ಇದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 