ಸ್ವಾಮಿ ವಿವೇಕಾನಂದ ಜಯಂತಿಯ ಪ್ರಯುಕ್ತ ನಡೆದ ಯುವ ಸಮ್ಮೇಳನ ಮತ್ತು ರಾಜ್ಯ ಯುವ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ
Youth conference and state youth award program held on the occasion of Swami Vivekananda Jayanti
ಸ್ವಾಮಿ ವಿವೇಕಾನಂದ ಜಯಂತಿಯ ಪ್ರಯುಕ್ತ ನಡೆದ ಯುವ ಸಮ್ಮೇಳನ ಮತ್ತು ರಾಜ್ಯ ಯುವ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ
ಮೂಡಲಗಿ 22 : ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದಿಂದ ಕೊಡಮಾಡುವ ರಾಜ್ಯ ಯುವ ಪ್ರಶಸ್ತಿಯನ್ನು ಮೂಡಲಗಿ ತಾಲೂಕಿನ ಸಂಕಲ್ಪ ಕ್ರೀಡಾ ಮತ್ತು ಸಮಾಜ ಸೇವಾ ಸಂಘದ ಅಧ್ಯಕ್ಷ ಸುಭಾಷ್ ಗೊಡ್ಯಾಗೋಳ ಅವರಿಗೆ ನೀಡಿ ಗೌರವಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಸವಣೂರು ಪಟ್ಟಣದಲ್ಲಿ ಇತ್ತೀಚೆಗೆ ಸ್ವಾಮಿ ವಿವೇಕಾನಂದ ಜಯಂತಿಯ ಪ್ರಯುಕ್ತ ನಡೆದ ಯುವ ಸಮ್ಮೇಳನ ಮತ್ತು ರಾಜ್ಯ ಯುವ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕಳೆದ 12 ವರ್ಷಗಳಿಂದ ಗ್ರಾಮೀಣ ಕ್ರೀಡೆ, ಕಲೆ, ಸಾಹಿತ್ಯ, ಪರಿಸರ ಸಂರಕ್ಷಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ನಿರಂತರ ಯುವ ಸಂಘಟನೆ, ಜನ ಜಾಗೃತಿಯಂತಹ ಸಮಾಜ ಸೇವಾ ಕಾರ್ಯವನ್ನು ಪರಿಗಣಿಸಿ 2024 - 25ನೇ ಸಾಲಿನ ರಾಜ್ಯ ಯುವ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ರಾಜ್ಯದ 31ಜಿಲ್ಲೆಯ ಸಮಾಜ ಸೇವಕರನ್ನು ಗುರುತಿಸಿ, ಗೌರವಿಸಲಾಗಿದ್ದು ಬೆಳಗಾವಿ ಜಿಲ್ಲೆಯಿಂದ ಸುಭಾಸ್ ಗೊಡ್ಯಾಗೋಳ ಪ್ರಶಸ್ತಿ ಪಡೆದುಕೊಂಡರು. ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್, ಪುತ್ತೂರು ಶಾಸಕಿ ಭಾಗೀರಥಿ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ರಾಜ್ಯಾಧ್ಯಕ್ಷ ಡಾ.ಬಾಲಾಜಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಸುರೇಶ್ ರೈ ಸೂಡಿಮುಳ್ಳು, ಜಿಲ್ಲಾಧ್ಯಾಕ್ಷ ಸಿದ್ದಣ್ಣ ದುರದುಂಡಿ, ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಸುಧೀರ ನಾಯರ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 