ಅಗ್ನಿವೀರ ಸೇನೆಗೆ ಆಯ್ಕೆಯಾದ ಯುವಕರಿಗೆ ಸನ್ಮಾನ
Youth selected for Agniveer Sena felicitated
ಕಾಗವಾಡ, 09 : ನಮ್ಮ ಗ್ರಾಮದ ಯುವಕರು ದೇಶದ ಸೇವೆ ಮಾಡಲು, ಭಾರತೀಯ ಸೇನೆಯಲ್ಲಿ ಅಗ್ನಿವೀರರಾಗಿ ಆಯ್ಕೆಯಾಗಿರಿವುದು ಇಡೀ ಗ್ರಾಮವೇ ಹೆಮ್ಮೆ ಪಡುವ ವಿಷಯವಾಗಿದೆ ಎಂದು ಜೂಗೂಳ ಗ್ರಾಮ ಪಂಚಾಯಿತಿ ಅಧ್ಯಕ್ಷ ಕಾಕಾಸಾಬ ಪಾಟೀಲ್ ಹೇಳಿದರು. ಅವರು ಮಂಗಳವಾರ ದಿ. 09 ರಂದು ತಾಲೂಕಿನ ಜೂಗೂಳ ಗ್ರಾಮ ಪಂಚಾಯಿತಿ ವತಿಯಿಂದ ಸೇನೆಯಲ್ಲಿ ಅಗ್ನಿವೀರರಾಗಿ ಆಯ್ಕೆಗೊಂಡ 3 ಯುವಕರನ್ನು ಸನ್ಮಾನಿಸಿ ಮಾತನಾಡುತ್ತಿದ್ದರು.
ಗ್ರಾಮದ ಓಂಕಾರ್ ಸುಂಕೆ ಈತನು ಈಗಾಗಲೇ ತರಬೇತಿ ಮುಗಿಸಿ ಗ್ರಾಮಕ್ಕೆ ಹಿಂದಿರುಗಿದ್ದು ಅದರಂತೆ ಸರ್ವೇಶ್ ದೇಸಾಯಿ ಮತ್ತು ರವೀಂದ್ರ ವಸೇದಾರ ತರಬೇತಿಗೆ ಪಡೆಯಲು ತೆರಳುತ್ತಿದ್ದಾರೆ. ಅವರ ದೇಶ ಸೇವೆ ಯಶಸ್ವಿಯಾಗಲಿ ಎಂದು ಹಾರೈಸಿದರು. ಈ ವೇಳೆ ಮುಖಂಡರಾದ ರಾಜು ಪಾಟೀಲ್, ಉದಯ ದೇಸಾಯಿ, ಬಾಬಾಸಾಬ್ ತಾರದಾಳೆ, ಮಹಾದೇವ ಕಾಂಬಳೆ, ನಿತಿನ್ ಪಾಟೀಲ್, ಅವಿನಾಶ್ ಪಾಟೀಲ್, ಪಿಡಿಒ ಶಿಲ್ಪಾ ನಾಯಿಕವಾಡಿ ಸೇರಿದಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 