ಚಿತ್ರರಂಗಕ್ಕೆ ಅನುದಾನ ನೀಡುವಂತೆ ಸಿಎಂಗೆ ಮನವಿ: ಜೈರಾಜ್
ಬೆಂಗಳೂರು, ಮೇ 29, ಸಿನಿಮಾ ಚಿತ್ರೀಕರಣ ಪ್ರಾರಂಭಕ್ಕೆ ಅವಕಾಶ, ಥಿಯೇಟರ್ ಆರಂಭಿಸುವಂತೆ ಸೇರಿ ಚಿತ್ರರಂಗಕ್ಕೆ ಅನುದಾನ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್ . ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಫಿಲ್ಮ್ ಚೇಂಬರ್ ಅಧ್ಯಕ್ಷ ಜೈರಾಜ್ ತಿಳಿಸಿದ್ದಾರೆ.ಗೃಹ ಕಚೇರಿ ಕೃಷ್ಣ ದಲ್ಲಿ ಮುಖ್ಯಮಂತ್ರಿ ಗಳಿಗೆ ಬೇಟಿಯಾದ ಬಳಿಕ ಪ್ರತಿಕ್ರಿಯಿಸಿದ ಅವರು,ಕೇಂದ್ರ ಸರ್ಕಾರದ ಜೊತೆಗೆ ಚರ್ಚಿಸಿ ಥಿಯೇಟರ್ಗೆ ಅವಕಾಶ ನೀಡುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ ಎಂದರು.ಜೂನ್ ಒಂದರಿಂದ ಎಲ್ಲಾ ರೀತಿಯ ಚಟುವಟಿಕೆಗಳು ಆರಂಭವಾಗಲಿವೆ. ಹೀಗಾಗಿ ನಮಗೂ ಅವಕಾಶ ಮಾಡಿಕೊಡುವಂತೆ ಮನವಿ ಸಲ್ಲಿಸಲಾಗಿದೆ ಎಂದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡುವ ಮಾರ್ಗದರ್ಶನದಂತೆ ಕೆಲಸಕಾರ್ಯ ಆರಂಭಿಸುತ್ತೇವೆ ಎಂದು ತಿಳಿಸಿದರು.ಅಲ್ಲದೇ, ಚಿತ್ರರಂಗಕ್ಕೂ ನೆರವು ನೀಡುವಂತೆ ಸಿಎಂ ಅವರಿಗೆ ಮನವಿ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು.
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ 