ಗುಡ್ಡ ಕುಸಿದು ಮಂಗಳೂರು ಹಾಸನ ರೈಲು ಸಂಚಾರ ಸ್ಥಗಿತ
ಮಂಗಳೂರು 03: ಭಾರೀ ಮಳೆಯಿಂದಾಗಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದು ಬಿದ್ದ ಪರಿಣಾಮ ಮಂಗಳೂರು-ಹಾಸನ ರೈಲು ಸಂಚಾರ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಕಾಡಿನ ಮಧ್ಯೆ ಪರದಾಡುವಂತಾಗಿದೆ.
ಹಾನಸ ಜಿಲ್ಲೆ ಸಕಲೇಶಪುರದ ಶಿರಬಾಗಲು ಬಳಿ ಗುಡ್ಡ ಕುಸಿದು ಬಿದ್ದಿದ್ದರಿಂದ ರೈಲು ಸಂಚಾರ ಸ್ಥಗಿತಗೊಂಡಿದೆ. ಮಂಗಳವಾರ ಬೆಳಗ್ಗೆ 11ಗಂಟೆಗೆ ಮಂಗಳೂರಿನಿಂದ ಹಾಸನಕ್ಕೆ ರೈಲು ಹೊರಟಿತ್ತು.
ಏತನ್ಮಧ್ಯೆ ಗುಡ್ಡ ತೆರವು ಕಾಯರ್ಾಚರಣೆಗೆ ಸಕಲೇಶಪುರದಿಂದ ತಂಡ ಹೊರಟು, ತೆರವು ಕಾಯರ್ಾಚರಣೆಯಲ್ಲಿ ತೊಡಗಿದೆ. ಆದರೆ ಕಾಡಿನ ಮಧ್ಯೆ ರೈಲು ನಿಲುಗಡೆಯಾಗಿದ್ದರಿಂದ ಪ್ರಯಾಣಿಕರು ತೊಂದರೆ ಅನುಭವಿಸುವಂತಾಗಿದೆ ಎಂದು ವರದಿ ತಿಳಿಸಿದೆ. ಕಳೆದ ಜೂನ್ ತಿಂಗಳಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಮೂರು ಬಾರಿ ಗುಡ್ಡ ಕುಸಿದು ಬಿದ್ದಿದ್ದರಿಂದ ರೈಲು ಸಂಚಾರ
ಸ್ಥಗಿತಗೊಂಡಿತ್ತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 