ಗುಡ್ಡ ಕುಸಿದು ಮಂಗಳೂರು ಹಾಸನ ರೈಲು ಸಂಚಾರ ಸ್ಥಗಿತ
ಮಂಗಳೂರು 03: ಭಾರೀ ಮಳೆಯಿಂದಾಗಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದು ಬಿದ್ದ ಪರಿಣಾಮ ಮಂಗಳೂರು-ಹಾಸನ ರೈಲು ಸಂಚಾರ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಕಾಡಿನ ಮಧ್ಯೆ ಪರದಾಡುವಂತಾಗಿದೆ.
ಹಾನಸ ಜಿಲ್ಲೆ ಸಕಲೇಶಪುರದ ಶಿರಬಾಗಲು ಬಳಿ ಗುಡ್ಡ ಕುಸಿದು ಬಿದ್ದಿದ್ದರಿಂದ ರೈಲು ಸಂಚಾರ ಸ್ಥಗಿತಗೊಂಡಿದೆ. ಮಂಗಳವಾರ ಬೆಳಗ್ಗೆ 11ಗಂಟೆಗೆ ಮಂಗಳೂರಿನಿಂದ ಹಾಸನಕ್ಕೆ ರೈಲು ಹೊರಟಿತ್ತು.
ಏತನ್ಮಧ್ಯೆ ಗುಡ್ಡ ತೆರವು ಕಾಯರ್ಾಚರಣೆಗೆ ಸಕಲೇಶಪುರದಿಂದ ತಂಡ ಹೊರಟು, ತೆರವು ಕಾಯರ್ಾಚರಣೆಯಲ್ಲಿ ತೊಡಗಿದೆ. ಆದರೆ ಕಾಡಿನ ಮಧ್ಯೆ ರೈಲು ನಿಲುಗಡೆಯಾಗಿದ್ದರಿಂದ ಪ್ರಯಾಣಿಕರು ತೊಂದರೆ ಅನುಭವಿಸುವಂತಾಗಿದೆ ಎಂದು ವರದಿ ತಿಳಿಸಿದೆ. ಕಳೆದ ಜೂನ್ ತಿಂಗಳಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಮೂರು ಬಾರಿ ಗುಡ್ಡ ಕುಸಿದು ಬಿದ್ದಿದ್ದರಿಂದ ರೈಲು ಸಂಚಾರ
ಸ್ಥಗಿತಗೊಂಡಿತ್ತು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 