ಹೂವಿನಹಡಗಲಿ: ಮೆಕ್ಕೆಜೋಳ ಹೊಲಕ್ಕೆ ಕೃಷಿ ನಿದರ್ೇಶಕರು ಭೇಟಿ
ಲೋಕದರ್ಶನ ವರದಿ
ಹೂವಿನಹಡಗಲಿ 20: ತಾಲೂಕಿನ ನಂದಿಹಳ್ಳಿ ಗ್ರಾಮದ ನೀರಾವರಿ ಪ್ರದೇಶದಲ್ಲಿ ಈಗಾಗಲೇ ಬಿತ್ತನೆ ಮಾಡಿರುವ ಮೆಕ್ಕೆಜೋಳ ಬೆಳೆಗೆ ಸೈನಿಕ ಹುಳು ಬಾಧೆ ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ಬಳ್ಳಾರಿ ಜಂಟಿ ಕೃಷಿ ನಿದರ್ೇಶಕ ಡಾ.ಮಲ್ಲಿಕಾರ್ಜುನ ಹೊಲಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಕಳೆದ ಒಂದು ತಿಂಗಳ ಹಿಂದೆ ನೀರಾವರಿ ಜಮೀನಿನಲ್ಲಿ ಮೆಕ್ಕೆಜೋಳ ಬಿತ್ತನೆ ಮಾಡಿದ ಗ್ರಾಮದ ರೈತ ಅರುಣಿ ಬಸವರಾಜ ಈಚೆಗೆ ಬೆಳೆಯಲ್ಲಿ ಸೈನಿಕ ಹುಳುಗಳು ಹೆಚ್ಚಾಗಿದ್ದರಿಂದ ಕೃಷಿ ಜಂಟಿ ನಿದರ್ೇಶಕರು ಬೆಳೆಯನ್ನು ವೀಕ್ಷಿಸಿದ ಅವರು ರೈತರು ಕೀಟ ಬಾಧೆಯನ್ನು ಆರಂಭಿಕ ಹಂತದಲ್ಲಿ ಗುರುತಿಸುವುದರಿಂದ ರೋಗ ನಿಯಂತ್ರಿಸಬಹುದು.ಜತೆಗೆ ಕೀಟನಾಶಕಗಳನ್ನು ಬಳಕೆಯಿಂದ ರೋಗ ಹತೋಟಿಗೆ ತರಬಹುದು ಎಂದರು.
ಸೈನಿಕ ಹುಳು ಬಾಧೆ ಕಾಣಿಸಿಕೊಂಡಿರುವ ಹೊಲಗಳಿಗೆ ಕಳೆದ ಒಂದು ವಾರದಿಂದ ನಿರಂತರ ಕೃಷಿ ಅಧಿಕಾರಿಗಳು ಭೇಟಿ ನೀಡಿ ರೈತರಿಗೆ ಅಗತ್ಯ ಸಲಹೆಗಳನ್ನು ನೀಡಿದ್ದಾರೆ. ಕೀಟ ನಾಶಕಗಳನ್ನು ಸಿಂಪರಣೆಯಿಂದ ರೋಗ ಹತೋಟಿಗೆ ಬಂದಿದೆ ಎಂದು ಸಹಾಯಕ ಕೃಷಿ ನಿದರ್ೇಶಕ ನೀಲಾನಾಯ್ಕ ಮಾಹಿತಿ ನೀಡಿದರು.
ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ಮುಂದಾಳು ಹನುಮಂತಪ್ಪ, ಶ್ರೀಹರಿ, ಕೃಷಿ ಇಲಾಖೆ ಸೌಜನ್ಯ, ಸವಿತಾ, ರೈತರಾದ ಅರುಣಿ ಬಸವರಾಜ, ಪಿ.ವಿ.ಬಸವರಾಜ, ವಿ.ಬಿ.ಶಿವಾನಂದ, ಕಂಠಿ ಆದರ್ಶ, ಎಂ.ವಿರುಪಾಕ್ಷಿ, ಅರುಣಿ ರುದ್ರಪ್ಪ ಇದ್ದರು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 