ಟಿಎಸ್ ಆರ್ ಟಿಸಿ ಲಾಭದಲ್ಲಿ ಸಾಗಲು ಪ್ರತಿವರ್ಷ ಬಜೆಟ್ನಲ್ಲಿ 1,000 ಕೋಟಿ ರೂ. ಮೀಸಲು-ತೆಲಂಗಾಣ ಸರ್ಕಾರ ಘೋಷಣೆ
ಮುಖ್ಯಮಂತ್ರಿ ಚಂದ್ರಶೇಖರ್ ರಾವ್
ಹೈದರಾಬಾದ್, ಡಿ 1- ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮ (ಟಿಎಸ್ ಆರ್ ಟಿಸಿ) ಲಾಭದಲ್ಲಿ ಸಾಗಲು ಪ್ರತಿವರ್ಷ ಬಜೆಟ್ನಲ್ಲಿ 1,000 ಕೋಟಿ ರೂ. ಮೀಸಲಿರಿಸುವುದಾಗಿ ರಾಜ್ಯ ಸರ್ಕಾರ ಪ್ರಕಟಿಸಿದೆ. ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಪ್ರಗತಿ ಭವನದಲ್ಲಿ ಭಾನುವಾರ ಸಂಜೆ ಆರ್ ಟಿಸಿ ನೌಕರರೊಂದಿಗೆ ಸಂವಾದ ನಡೆಸಿದ ನಂತರ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಅವರು ಈ ಘೋಷಣೆ ಮಾಡಿದ್ದಾರೆ.
ಯಾವುದೇ ಆರ್ ಟಿಸಿ ನೌಕರರನ್ನು ವಜಾಗೊಳಿಸುವುದಿಲ್ಲ ಎಂದ ಮುಖ್ಯಮಂತ್ರಿಯವರು, ಆರ್ಟಿಸಿ ಬಸ್ಗಳ ಮಾರ್ಗಗಳಲ್ಲಿ ಖಾಸಗಿ ಬಸ್ಗಳ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಕಳೆದ 52ದಿನಗಳಿಂದ ಮುಷ್ಕರ ನಡೆಸುತ್ತಿರುವ ನೌಕರರೊಂದಿಗೆ ಬಹುಶ: ಮುಖ್ಯಮಂತ್ರಿಯವರು ಇದೇ ಮೊದಲ ಬಾರಿಗೆ ಇಂತಹುದೊಂದು ಸಭೆ ನಡೆಸಿದ್ದಾರೆ.
ಮುಂದಿನ ಕೆಲವೇ ತಿಂಗಳಲ್ಲಿ ನಿಗಮ ಲಾಭದತ್ತ ಸಾಗಬೇಕಿದ್ದು, ಪ್ರತಿ ವರ್ಷ 1,000 ಕೋಟಿ ರೂ. ಲಾಭ ಗಳಿಸಬೇಕಿದೆ. ನಿಗಮದ ನೌಕರರು ವಾರ್ಷಿಕ 1 ಲಕ್ಷ ರೂ. ಬೋನಸ್ ಪಡೆಯಲಿದ್ದಾರೆ ಎಂದು ಅವರು ಹೇಳಿದರು. ನೌಕರರ ಸೆಪ್ಟೆಂಬರ್ ತಿಂಗಳ ವೇತನವನ್ನು ನಾಳೆ, ಸೋಮವಾರ ಪಾವತಿಸಲಾಗುವುದು. ಮುಷ್ಕರ ಅವಧಿಗೂ ವೇತನ ಪಾವತಿಸಲಾಗುವುದು. ನಿಗಮದ ನೌಕರರ ನಿವೃತ್ತಿ ವಯಸ್ಸನ್ನು 58ರಿಂದ 60ಕ್ಕೆ ಏರಿಸಲಾಗುವುದು ಎಂದು ಚಂದ್ರಶೇಖರ್ ರಾವ್ ಹೇಳಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 