ಮುಖ್ಯಮಂತ್ರಿ ಪರಿಹಾರ ನಿಧಿಗೆ 1.25 ಲಕ್ಷ ರೂ. ದೇಣಿಗ ನೀಡಿದ ನಿವೃತ್ತ ಶಿಕ್ಷಕಿ
ಬೆಂಗಳೂರು, ಏ.1, ಶಿಕ್ಷಣ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ 86 ಪ್ರಾಯದ ನಿವೃತ್ತ ಶಿಕ್ಷಕಿಯೊಬ್ಬರು ಕೊರೋನ ವೈರಸ್ ವಿರುದ್ಧದ ಹೋರಾಟಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1.25 ಲಕ್ಷ ರೂ. ಗಳನ್ನು ದೇಣಿಗೆಯಾಗಿ ನೀಡಿದ್ದಾರೆ.ಬೆಂಗಳೂರಿನ ಮಲ್ಲೇಶ್ವರಂ ನಿವಾಸಿಯೂ ಆಗಿರುವ ಜಿ.ಜಯಲಕ್ಷಮ್ಮ ಅವರು ತಮ್ಮ ಪಿಂಚಣಿ ನಿಧಿಯಲ್ಲಿ ಉಳಿತಾಯ ಮಾಡಿದ್ದ 1.25 ಲಕ್ಷ ರೂ. ಗಳನ್ನು ದೇಣಿಗೆಯಾಗಿ ನೀಡಿ, ಮಾನವೀಯತೆ ಮರೆದಿದ್ದಾರೆ.ಮಲ್ಲೇಶ್ವರಂ ಬಾಲಕಿಯರ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿದ್ದ ಜಿ.ಜಯಲಕ್ಷಮ್ಮ ಅವರು 1992ನೇ ಸಾಲಿನ ಅಕ್ಟೋಬರ್ ನಲ್ಲಿ ನಿವೃತ್ತಿ ಹೊಂದಿದರು. ಸತತ ಮೂವರು ವರ್ಷಗಳ ಕಾಲ ಅವರು ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ.
ಅಂದಿನಿಂದ ಪಿಂಚಣಿಯಲ್ಲಿ ಉಳಿತಾಯ ಮಾಡಿದ್ದ ಹಣವನ್ನು ದೇಣಿಗೆ ನೀಡಿದ್ದಾರೆ.ಇಡೀ ವಿಶ್ವವನ್ನೇ ಕೊರೊನಾ ವೈರಸ್ ಆವರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ಕೋವಿಡ್-19 ಸೋಂಕು ವಿರುದ್ಧ ಹೋರಾಡುತ್ತಿದ್ದಾರೆ. ಮಾರಣಾಂತಿಕ ವೈರಸ್ ವಿರುದ್ಧ ಜಾಗೃಕರಾಗಿ ಹಾಗೂ ಆರೋಗ್ಯ ಸಂಸ್ಥೆಗಳು ನೀಡಿರುವ ಸೂಚನೆಗಳನ್ನು ಚಾಚು ತಪ್ಪದೇ ಪಾಲಿಸುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ನಾವು ಕೂಡ ನಮ್ಮ ಕೈಲಾದಷ್ಟು ಸಹಾಯ ಮಾಡಲು ಮುಂದಾಗಿದ್ದೇವೆ ಎಂದು ಜಿ.ಜಯಲಕ್ಷಮ್ಮ ತಿಳಿಸಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 