ಕೋವಿಡ್ ಪರಿಹಾರ ನಿಧಿಗೆ ಕೆಸಿಸಿ ಬ್ಯಾಂಕಿನಿಂದ 10 ಲಕ್ಷ ರೂ.
ಧಾರವಾಡ, ಏ.29,ಕೆಸಿಸಿ ಬ್ಯಾಂಕ್ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಬುಧವಾರ 10 ಲಕ್ಷ ರೂಪಾಯಿಗಳ ಚೆಕ್ನ್ನು ಸಲ್ಲಿಸಲಾಯಿತು.ಬ್ಯಾಂಕಿನ ಅಧ್ಯಕ್ಷ ಬಾಪುಗೌಡ ಪಾಟೀಲ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಅವರ ಮೂಲಕ ಚೆಕ್ ಸಲ್ಲಿಸಲಾಯಿತು. ಕೊರೊನಾ ವೈರಸ್ ಹರಡುವಿಕೆಯಿಂದ ಜನಜೀವನ ಅಸ್ತವ್ಯವಸ್ತಗೊಂಡಿದೆ. ಈ ಪರಿಸ್ಥಿತಿ ನಿಭಾಯಿಸಲು ರಾಜ್ಯ ಸರಕಾರ ನಿರಂತರ ಶ್ರಮಿಸುತ್ತಿದೆ. ಸರಕಾರದ ಚಾಣಾಕ್ಷತನದ ಕಾರ್ಯವೈಖರಿಯಿಂದ ಪರಿಸ್ಥಿತಿ ಗಂಭೀರ ಹಂತ ತಲುಪಿಲ್ಲ ಎಂಬುದು ಸಮಾಧಾನದ ಸಂಗತಿ. ’ಸರಕಾರಕ್ಕೆ ಈ ಸಂದರ್ಭದಲ್ಲಿ ಆರ್ಥಿಕ ನೆರವು ನೀಡುವ ಸಲುವಾಗಿ ಬ್ಯಾಂಕ್ ಮತ್ತು ಬ್ಯಾಂಕಿನ ಸಿಬ್ಬಂದಿ ಸಂಗ್ರಹಿಸಿದ 10 ಲಕ್ಷ ರೂಪಾಯಿಗಳ ಚೆಕ್ನ್ನು ಸಲ್ಲಿಸಲಾಯಿತು. ಅವಿಭಜಿತ ಧಾರವಾಡ ಜಿಲ್ಲೆಯ ಕಾರ್ಯವ್ಯಾಪ್ತಿ ಹೊಂದಿರುವ ಬ್ಯಾಂಕಿನ ಅಧೀನದ ಸಹಕಾರ ಸಂಘಗಳ ವತಿಯಿಂದ ಈಗಾಗಲೇ 19,20,800 ರೂಪಾಯಿಗಳನ್ನು ಸಂಗ್ರಹಿಸಿ ಸಹಕಾರ ಇಲಾಖೆಯ ಉಪನಿಬಂಧಕರ ಮೂಲಕ ಪರಿಹಾರ ನಿಧಿಗೆ ಸಲ್ಲಿಸಲಾಗಿದೆ’ ಎಂದು ಬ್ಯಾಂಕಿನ ಅಧ್ಯಕ್ಷ ಬಾಪುಗೌಡ ಪಾಟೀಲ ತಿಳಿಸಿದರು. ಬ್ಯಾಂಕಿನ ನಿರ್ದೇಶಕರಾದ ಮಲ್ಲಿಕಾರ್ಜುನ ಹೊರಕೇರಿ, ನಿಂಗನಗೌಡ ಮರಿಗೌಡರ, ಉಮೇಶ ಭೂಮಣ್ಣವರ, ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಮುನಿಯಪ್ಪ ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 