10 ರೂಪಾಯಿಗೆ ಬಿಸಿಯೂಟ, ಶೇ 80 ರಷ್ಟು ಖಾಸಗಿ ಉದ್ಯೋಗ ಸ್ಥಳೀಯರಿಗೆ ಮೀಸಲು
ಉದ್ಧವ್ ಠಾಕ್ರೆ
ಮುಂಬೈ ನ 29-ಮಹಾರಾಷ್ಟ್ರ ವಿಕಾಸ್ ಅಘಾಡಿ (ಎಂವಿಎ) ತನ್ನ ಐದು ವರ್ಷಗಳ ಕಾರ್ಯಸೂಚಿಯನ್ನು ಬಿಡುಗಡೆ ಮಾಡಿದೆ. ಶೇಕಡ 80 ರಷ್ಟು ಖಾಸಗಿ ವಲಯದ ಉದ್ಯೋಗಗಳನ್ನು ಸ್ಥಳೀಯ ನೀಡುವುದು ಮತ್ತು 10 ರೂ ಬಿಸಿ ಊಟ ಕೊಡುವ ವಾಗ್ದಾನ ಮಾಡಲಾಗಿದೆ.
ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಪ್ರಮಾಣವಚನ ಸ್ವೀಕರಿಸುವ ಕೆಲವೇ ಗಂಟೆಗಳ ಮೊದಲು ಬಿಡುಗಡೆ ಮಾಡಿದ ಸಾಮಾನ್ಯ ಕನಿಷ್ಠ ಕಾರ್ಯಕ್ರಮದಲ್ಲಿ (ಸಿಎಂಪಿ), ಇದನ್ನು ಪ್ರಕಟಿಸಲಾಗಿದೆ.
'ಸಂವಿಧಾನದಲ್ಲಿ ಪ್ರತಿಪಾದಿಸಿರುವ ಜಾತ್ಯತೀತ ಮೌಲ್ಯಗಳನ್ನು ಎತ್ತಿಹಿಡಿಯಲು ಮೈತ್ರಿ ಪಾಲುದಾರರು ಪಕ್ಷಗಳು ಬದ್ಧರಾಗಿದ್ದು ಸರ್ಕಾರವು ಧರ್ಮ, ಮತ, ಜಾತಿ ಅಥವಾ ಭಾಷೆಯ ಆಧಾರದ ಮೇಲೆ ತಾರತಮ್ಯ ಮಾಡುವುದಿಲ್ಲ ಎಂದೂ ಸ್ಪಷ್ಟಪಡಿಸಿದೆ.
ಕೊಳೆಗೇರಿ ಪುನರ್ವಸತಿ ಕಾರ್ಯಕ್ರಮದಡಿ ಮುಂಬೈನ ಬಡವರಿಗೆ ವಾಸಕ್ಕೆ ದೊಡ್ಡ ಮನೆ ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಸಿಎಂಪಿ ಸ್ಪಷ್ಟ ಭರವಸೆ ನೀಡಲಾಗಿದೆ."ಕಾರ್ಯಸೂಚಿಯು ಮಹಾರಾಷ್ಟ್ರವನ್ನು ಪ್ರಗತಿಯ ಹಾದಿಯಲ್ಲಿ ಕೊಂಡೊಯ್ಯುಲಿದೆ ಎಂದು ನಂತರ ನಾಯಕರು ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಖಾಸಗಿ ವಲಯದಲ್ಲಿ 80 ರಷ್ಟು ಉದ್ಯೋಗಗಳನ್ನು ಸ್ಥಳೀಯರಿಗಾಗಿ ಕಾಯ್ದಿರಿಸಲು ಸರ್ಕಾರ ಶಾಸನ ತರಲಿದೆ ಎಂದೂ 15 ವರ್ಷಗಳಿಂದ ಇಲ್ಲಿ ವಾಸಿಸುತ್ತಿರುವ ವ್ಯಕ್ತಿಗೆ ಆದ್ಯತೆ ನೀಡಲಾಗುವುದು ಎಂದು ಸಿಎಂಪಿಯಲ್ಲಿ ಹೇಳಲಾಗಿದೆ.
ಹಿರಿಯ ಸೇನಾ ಮುಖಂಡ ಏಕನಾಥ ಶಿಂಧೆ, ರಾಜ್ಯ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಮುಖ್ಯಸ್ಥ ಜಯಂತ್ ಪಾಟೀಲ್ ಮತ್ತು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಬಾಳಾಸಾಹೇಬ್ ಥೋರತ್ ಈ ಕಾರ್ಯಸೂಚಿ ದಾಖಲೆ ಬಿಡುಗಡೆ ಮಾಡಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 