ಕೌಲಾಲಂಪುರ್ ನಿಂದ ಬೆಂಗಳೂರಿಗೆ ಬಂದಿಳಿದ 108 ಪ್ರಯಾಣಿಕರು
ಬೆಂಗಳೂರು, ಮೇ 23,ಕೋವಿಡ್-19 ಲಾಕ್ ಡೌನ್ ಪರಿಸ್ಥಿತಿಯಲ್ಲಿ ಮಲೇಷ್ಯಾದ ಕೌಲಾಲಂಪುರ್ ನಿಂದ ಮೇ 22ರ ರಾತ್ರಿ 9.30 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಹನ್ನೊಂದನೇ ವಿಮಾನದಲ್ಲಿ 108 ಮಂದಿ ಅನಿವಾಸಿ ಭಾರತೀಯರು ಆಗಮಿಸಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಒಟ್ಟು 108 ಮಂದಿ ಪ್ರಯಾಣಿಕರಲ್ಲಿ ಒಂದು ಗರ್ಭಿಣಿ ಮಹಿಳೆ, ಇಬ್ಬರು ಮಕ್ಕಳು ಸೇರಿದಂತೆ 80 ಪುರುಷರು ಮತ್ತು 28 ಮಹಿಳೆಯರು ಇದ್ದಾರೆ. ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳು 108 ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದ್ದು, ಯಾವುದೇ ಪ್ರಯಾಣಿಕರಲ್ಲಿ ಕೊರೋನಾ ವೈರಾಣು ಸೋಂಕಿನ ಲಕ್ಷಣಗಳು ಕಂಡುಬಂದಿರುವುದಿಲ್ಲ.
108 ಪ್ರಯಾಣಿಕರನ್ನು 14 ದಿನಗಳ ಕ್ವಾರಂಟೈನ್ ಗಾಗಿ ಹೋಟೆಲ್ ಗಳಿಗೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ. ಜಕಾರ್ತದಿಂದ 214 ಪ್ರಯಾಣಿಕರು ಆಗಮನಕೋವಿಡ್-19 ಲಾಕ್ ಡೌನ್ ಪರಿಸ್ಥಿತಿಯಲ್ಲಿ ಇಂಡೋನೇಷ್ಯಾದ ಜರ್ಕಾತದಿಂದ ಮೇ 23ರ ಬೆಳಗಿನ ಜಾವ 1:40 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಹನ್ನೆರಡನೆಯ ವಿಮಾನದಲ್ಲಿ 214 ಮಂದಿ ಅನಿವಾಸಿ ಭಾರತೀಯರು ಆಗಮಿಸಿದ್ದಾರೆ. ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳು 214 ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದ್ದು, ಯಾವುದೇ ಪ್ರಯಾಣಿಕರಲ್ಲಿ ಕೊರೋನಾ ವೈರಾಣು ಸೋಂಕಿನ ಲಕ್ಷಣಗಳು ಕಂಡುಬಂದಿರುವುದಿಲ್ಲ. 214 ಪ್ರಯಾಣಿಕರನ್ನು 14 ದಿನಗಳ ಕ್ವಾರಂಟೈನ್ ಗಾಗಿ ಹೋಟೆಲ್ ಗಳಿಗೆ ಕಳುಹಿಸಿಕೊಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 