ಇನ್ನು ಹೊರ ಜಿಲ್ಲೆಗಳಿಂದ ಬೆಂಗಳೂರಿಗೆ ಬರುವವರಿಗೂ 14 ದಿನಗಳ ಕ್ವಾರಂಟೈನ್ ಕಡ್ಡಾಯ: ಬಿಬಿಎಂಪಿ
ಬೆಂಗಳೂರು, ಮೇ 10,ಕೊರೋನಾ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ಸಲುವಾಗಿ ಅನ್ಯ ರಾಜ್ಯಗಳಿಂದ ಬರುವವರ ಜೊತೆಗೆ, ಇತರ ಜಿಲ್ಲೆಗಳಿಂದ ನಗರಕ್ಕೆ ಆಗಮಿಸುವ ಪ್ರತಿಯೊಬ್ಬರಿಗೂ 14 ದಿನಗಳ ಕಾಲ ಕಡ್ಡಾಯ ಕ್ವಾರಂಟೈನ್ ನಿಯಮ ಜಾರಿಗೊಳಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಂದಾಗಿದೆ. ಹೊರ ಜಿಲ್ಲೆಗಳಿಂದ ಪಾಸ್ ಪಡೆದು ಬರುವವರು ನಗರವನ್ನು ಪ್ರವೇಶಿಸುತ್ತಿದ್ದಂತೆಯೇ ಅವರ ವಿವರ ಪಡೆದು ಅವರ ಕೈಗಳಿಗೆ ಮುದ್ರೆ ಹಾಕಲಾಗುತ್ತಿದೆ. ಕಡ್ಡಾಯವಾಗಿ 14 ದಿನ ಮನೆಯಲ್ಲೇ ಇರಬೇಕು ಹೊರಗಡೆ ಎಲ್ಲೂ ಅಡ್ಡಾಡಬಾರದು ಎಂದು ಸೂಚನೆ ನೀಡಲಾಗುತ್ತಿದೆ. ಈ ನಿಯಮ ಶುಕ್ರವಾರದಿಂದಲೇ ಜಾರಿಯಲ್ಲಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.
ಜೊತೆಗೆ, ಹೊರ ರಾಜ್ಯದಿಂದ ಬರುವವರು ನಿಗದಿಪಡಿಸಿರುವ ಹೋಟೆಲ್ ಅಥವಾ ವಿದ್ಯಾರ್ಥಿನಿಲಯಗಳನ್ನು ಆಯ್ಕೆ ಮಾಡಿಕೊಂಡು 14 ದಿನ ಕಾಲ ಕ್ವಾರಂಟೈನ್ ಗೆ ಒಳಪಡಬೇಕು. ಆ ಹೋಟೆಲ್ಗಳ ವೆಚ್ಚವನ್ನು ಅವರೇ ಪಾವತಿಸಬೇಕಾಗುತ್ತದೆ. ಆರ್ಥಿಕವಾಗಿ ಶಕ್ತರಲ್ಲದವರಿಗೆ ಹಾಸ್ಟೆಲ್ಗಳಲ್ಲಿ ಉಳಿದುಕೊಳ್ಳುವುದಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಹಾಸ್ಟೆಲ್ಗಳಲ್ಲಿ ಉಚಿತ ಊಟ ಒದಗಿಸಲಾಗುತ್ತದೆ.ಪಂಚತಾರಾ ಹೋಟೆಲ್ಗಳಿಗೆ, ಇತರ ಐಷಾರಾಮಿ ಹೋಟೆಲ್ಗಳಿಗೆ ಹಾಗೂ ಮಾಮೂಲಿ ಹೋಟೆಲ್ಗಳಿಗೆ ಪ್ರತ್ಯೇಕ ದರ ನಿಗದಿಪಡಿಸಲಾಗಿದೆ. ಇದು ಮಾಮೂಲಿ ದರಕ್ಕಿಂತ ತುಂಬಾ ಕಡಿಮೆ ಇದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 