1542 ಪ್ರಕರಣಗಳು ಲೋಕ ಅದಾಲತನಲ್ಲಿ ಇತ್ಯರ್ಥ
1542 cases settled in Lok Adalat
ರಾಯಬಾಗ, 14 : ನ್ಯಾಯಾಲಯದಲ್ಲಿ ಇರುವ ಪ್ರಕರಣಗಳನ್ನು ಪಕ್ಷಗಾರರು ರಾಜಿ ಸಂಧಾನ ಮೂಲಕ ಲೋಕ ಅದಾಲತನಲ್ಲಿ ಇತ್ಯರ್ಥ ಪಡಿಸಿಕೊಂಡು ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯ ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಜಗದೀಶ ಬಿಸೇರೊಟ್ಟಿ ಹೇಳಿದರು.
ಶನಿವಾರ ಪಟ್ಟಣದ ನ್ಯಾಯಾಲಯದಲ್ಲಿ ನಡೆದ ರಾಷ್ಟ್ರೀಯ ಬೃಹತ್ತ ಲೋಕ ಅದಾಲತನಲ್ಲಿ ಪಕ್ಷಗಾರರನ್ನು ಮತ್ತು ವಕೀಲರನ್ನು ಉದ್ದೇಶಿಸಿ ಮಾತನಾಡಿದ ಅವರು, ನೆರೆಹೊರೆಯವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರೆ ಯಾವದೇ ತಂಟೆ ತಕರಾರು ಉದ್ಭವಿಸುವುದಿಲ್ಲ. ಲೋಕ ಅದಾಲತ ನಲ್ಲಿ ತಮ್ಮ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಂಡರೆ, ಸಮಯ ಮತ್ತು ಹಣ ಉಳಿತಾಯ ಆಗುತ್ತದೆ ಎಂದರು.
ಇವತ್ತು ಒಟ್ಟು 1542 ಪ್ರಕರಣಗಳನ್ನು ಲೋಕ ಅದಾಲತ ನಲ್ಲಿ ರಾಜಿ ಸಂಧಾನ ಮೂಲಕ ಇತ್ಯರ್ಥ ಪಡಿಸಲಾಗಿದೆ ಎಂದು ತಿಳಿಸಿದರು.ಪ್ರಧಾನ ದಿವಾಣಿ ನ್ಯಾಯಾಧೀಶೆ ಪ್ರೀಯಾ ಭಟ್ಟಡ, ಹೆಚ್ಚುವರಿ ದಿವಾಣಿ ನ್ಯಾಯಾಧೀಶ ದಾನಪ್ಪ ಹಾಗೂ ವಕೀಲರು ಮತ್ತು ಪಕ್ಷಗಾರರು, ನ್ಯಾಯಾಲಯದ ಸಿಬ್ಬಂದಿ ಇದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 