1542 ಪ್ರಕರಣಗಳು ಲೋಕ ಅದಾಲತನಲ್ಲಿ ಇತ್ಯರ್ಥ
1542 cases settled in Lok Adalat
ರಾಯಬಾಗ, 14 : ನ್ಯಾಯಾಲಯದಲ್ಲಿ ಇರುವ ಪ್ರಕರಣಗಳನ್ನು ಪಕ್ಷಗಾರರು ರಾಜಿ ಸಂಧಾನ ಮೂಲಕ ಲೋಕ ಅದಾಲತನಲ್ಲಿ ಇತ್ಯರ್ಥ ಪಡಿಸಿಕೊಂಡು ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯ ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಜಗದೀಶ ಬಿಸೇರೊಟ್ಟಿ ಹೇಳಿದರು.
ಶನಿವಾರ ಪಟ್ಟಣದ ನ್ಯಾಯಾಲಯದಲ್ಲಿ ನಡೆದ ರಾಷ್ಟ್ರೀಯ ಬೃಹತ್ತ ಲೋಕ ಅದಾಲತನಲ್ಲಿ ಪಕ್ಷಗಾರರನ್ನು ಮತ್ತು ವಕೀಲರನ್ನು ಉದ್ದೇಶಿಸಿ ಮಾತನಾಡಿದ ಅವರು, ನೆರೆಹೊರೆಯವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರೆ ಯಾವದೇ ತಂಟೆ ತಕರಾರು ಉದ್ಭವಿಸುವುದಿಲ್ಲ. ಲೋಕ ಅದಾಲತ ನಲ್ಲಿ ತಮ್ಮ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಂಡರೆ, ಸಮಯ ಮತ್ತು ಹಣ ಉಳಿತಾಯ ಆಗುತ್ತದೆ ಎಂದರು.
ಇವತ್ತು ಒಟ್ಟು 1542 ಪ್ರಕರಣಗಳನ್ನು ಲೋಕ ಅದಾಲತ ನಲ್ಲಿ ರಾಜಿ ಸಂಧಾನ ಮೂಲಕ ಇತ್ಯರ್ಥ ಪಡಿಸಲಾಗಿದೆ ಎಂದು ತಿಳಿಸಿದರು.ಪ್ರಧಾನ ದಿವಾಣಿ ನ್ಯಾಯಾಧೀಶೆ ಪ್ರೀಯಾ ಭಟ್ಟಡ, ಹೆಚ್ಚುವರಿ ದಿವಾಣಿ ನ್ಯಾಯಾಧೀಶ ದಾನಪ್ಪ ಹಾಗೂ ವಕೀಲರು ಮತ್ತು ಪಕ್ಷಗಾರರು, ನ್ಯಾಯಾಲಯದ ಸಿಬ್ಬಂದಿ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 