ಶ್ರಮಿಕ ರೈಲಿನ ಮೂಲಕ ಜಾರ್ಖಂಡದತ್ತ 1550 ವಲಸಿಗರು
ಬಳ್ಳಾರಿ,ಮೇ 22: ಬಳ್ಳಾರಿ ರೈಲ್ವೆ ನಿಲ್ದಾಣದಿಂದ 1550 ಜನ ಜಾರ್ಖಂಡ್ ವಲಸಿಗರನ್ನು ಹೊತ್ತ ಶ್ರಮಿಕ ವಿಶೇಷ ರೈಲು ಉತ್ತರಪ್ರದೇಶದತ್ತ ಶುಕ್ರವಾರ ಬೆಳಗ್ಗೆ ತೆರಳಿತು.
ಬಳ್ಳಾರಿ ರೈಲ್ವೆ ನಿಲ್ದಾಣದಿಂದ ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ, ಅಪರ ಜಿಲ್ಲಾಧಿಕಾರಿ ಮಂಜುನಾಥ, ಅಪರ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್.ಲಾವಣ್ಯ, ಪ್ರೋಬೆಷನರಿ ಐಎಎಸ್ ಈಶ್ವರ್ ಕಾಂಡೂ, ಸಹಾಯಕ ಆಯುಕ್ತ ರಮೇಶ ಕೋನರೆಡ್ಡಿ, ಡಿವೈಎಸ್ಪಿ ರಾಮರಾವ್ ಸೇರಿದಂತೆ ಅನೇಕರು ಸುರಕ್ಷಿತವಾಗಿ ತಮ್ಮೂರನ್ನು ತಲುಪಿ ಮತ್ತೇ ಬಳ್ಳಾರಿ ಜಿಲ್ಲೆಗೆ ಅತ್ಯಂತ ಖುಷಿಯಿಂದ ಬನ್ನಿ ಎಂದು ಶುಭಹಾರೈಸಿ ಚಪ್ಪಾಳೆ ತಟ್ಟಿ ಬೀಳ್ಕೊಟ್ಟರು.
ಬಳ್ಳಾರಿ,ತೋರಣಗಲ್ಲು ಸೇರಿದಂತೆ ಜಿಲ್ಲೆಯ ವಿವಿಧೆಡೆ ಜೀವನ ನಿರ್ವಹಣೆಗೆ ಬಂದಿದ್ದ ಜಾರ್ಖಂಡ ರಾಜ್ಯದ 1550 ಜನ ವಲಸಿಗರನ್ನು ಬಳ್ಳಾರಿ ಕೇಂದ್ರ ಬಸ್ ನಿಲ್ದಾಣದಲ್ಲಿ ಹಾಗೂ ತೋರಣಗಲ್ಲುವಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿ ಅವರಿಗೆ ಪ್ರಮಾಣಪತ್ರ ವಿತರಿಸಿ ಹಾಗೂ ಅಲ್ಲಿಯೇ ಟಿಕೆಟ್ನ್ನು ಇವರಿಗೆ ನೀಡಲಾಗಿತ್ತು. ಆ ವಲಸಿಗರನ್ನು ಅವರಿಗೆ ನೀಡಲಾದ ಟಿಕೆಟ್ ಹಿಂಬದಿಯಲ್ಲಿ ಬರೆಯಲಾದ ಸೀಟ್ ಸಂಖ್ಯೆ ಮತ್ತು ಬೋಗಿ ನೋಡಿಕೊಂಡು ಅವರನ್ನು ಪೊಲೀಸ್ ಸಿಬ್ಬಂದಿ ಹಾಗೂ ಜಿಲ್ಲಾಡಳಿತದ ಸಿಬ್ಬಂದಿ ಸಂಬಂಧಿಸಿದ ಬೋಗಿಯಲ್ಲಿ ಕುಳಿತುಕೊಳ್ಳುವಂತೆ ಬೆಳಗ್ಗೆ 7ರಿಂದಲೇ ತಿಳಿಸುತ್ತಿದ್ದರು.
ಈ ವಲಸಿಗ ಪ್ರಯಾಣಿಕರು ಪ್ರಯಾಣದ ಸಂದರ್ಭದಲ್ಲಿ ಹಸಿವಿನಿಂದ ಬಳಲಬಾರದು ಎಂಬ ಸದುದ್ದೇಶದಿಂದ ಎರಡು ಬಿಸ್ಕಟ್ ಪ್ಯಾಕೇಟ್,ಎರಡು ಬ್ರೇಡ್ ಪ್ಯಾಕ್,ಮೂರು ಲೀಟರ್ ನೀರು, ಎರಡು ಪ್ಯಾಕೇಟ್ ಆಹಾರ ಪೊಟ್ಟಣ, ಮಿಚರ್ಿ ಬಜಿ ಹಾಗೂ ಇನ್ನೀತರ ಆಹಾರ ಸಾಮಗ್ರಿಗಳ ಆಹಾರ ಕಿಟ್ಗಳನ್ನು ಪ್ರತಿಯೊಬ್ಬ ವಲಸಿಗರಿಗೂ ಜಿಲ್ಲಾಡಳಿತದ ವತಿಯಿಂದ ನೀಡಲಾಯಿತು.
ರೈಲ್ವೆ ನಿಲ್ದಾಣದೊಳಗೆ ಆಗಮಿಸುತ್ತಲೇ ವಲಸಿಗ ಪ್ರಯಾಣಿಕರಿಗೆ ಸ್ಯಾನಿಟೈಸರ್ ಕೈಗೆ ಸಿಂಪಡಿಸಲಾಗುತ್ತಿತ್ತು. ರೆಡ್ಕ್ರಾಸ್ ಸಂಸ್ಥೆಯವರು ಇದೇ ಸಂದರ್ಭದಲ್ಲಿ ಮಾಸ್ಕ್ಗಳು ಹಾಗೂ ಲಘು ಉಪಹಾರ ವಿತರಿಸಿದರು.
ಜಾರ್ಖಂಡ ರಾಜ್ಯದ ವಿವಿಧ ಜಿಲ್ಲೆಗಳಿಗೆ ತೆರಳಲು ರೈಲಿನ ಸೀಟಿನಲ್ಲಿ ಆಸೀನರಾಗಿದ್ದ ವಲಸಿಗರು ತಮ್ಮೂರು ಕಡೆ ಸುರಕ್ಷಿತವಾಗಿ ಪಯಣಿಸುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸುತ್ತಿರುವುದು ಕಂಡುಬಂದಿತು.
ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ, ಅಪರ ಜಿಲ್ಲಾಧಿಕಾರಿ ಮಂಜುನಾಥ, ಸಹಾಯಕ ಆಯುಕ್ತ ರಮೇಶ ಕೋನರೆಡ್ಡಿ, ಎಎಸ್ಪಿ ಲಾವಣ್ಯ ಅವರು ಸ್ಥಳದಲ್ಲಿಯೇ ಉಪಸ್ಥಿತರಿದ್ದು ಬಳ್ಳಾರಿ ರೈಲ್ವೆ ನಿಲ್ದಾಣದಲ್ಲಿನ ಎಲ್ಲ ಸಿದ್ಧತೆಗಳನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ವಲಸಿಗರನ್ನು ಸುರಕ್ಷಿತವಾಗಿ ಅವರ ಊರುಗಳಿಗೆ ಕಳುಹಿಸಿಕೊಡುವ ನಿಟ್ಟಿನಲ್ಲಿ ಸಕಲ ಕ್ರಮಗಳನ್ನು ಜಿಲ್ಲಾಡಳಿತ ವತಿಯಿಂದ ಕೈಗೊಳ್ಳಲಾಗಿದೆ. ಮಾರ್ಗಮಧ್ಯೆ ಯಾರಿಗೂ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಆಹಾರ ಪೊಟ್ಟಣಗಳನ್ನು ವಿತರಿಸಲಾಗಿದೆ. ಎಲ್ಲರಿಗೂ ವೈದ್ಯಕೀಯ ತಪಾಸಣೆ ಮಾಡಿ ಕಳುಹಿಸಿಕೊಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿದರ್ೇಶಕ ಸೋಮಶೇಖರ ಬಂಕದ್, ಜಿಲ್ಲಾ ಕಾಮರ್ಿಕ ಅಧಿಕಾರಿಗಳಾದ ಚಂದ್ರಶೇಖರ ಐಲಿ, ಅಲ್ತಾಫ್ ಸೇರಿದಂತೆ ಪೊಲೀಸ್ ಇಲಾಖೆ ಅಧಿಕಾರಿಗಳು ಮತ್ತು ಕಂದಾಯ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 