ಯಡಿಯೂರಪ್ಪ ಸಂಪುಟ ಸೇರಿದ 17 ಸಚಿವರು: ರಾಜ್ಯಪಾಲರಿಂದ ಪ್ರತಿಜ್ಞಾವಿಧಿ ಬೋಧನೆ
ಬೆಂಗಳೂರು, ಆ 20 ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಿದ್ದು, ಇಂದು 17 ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಭವನದ ಗಾಜಿನಮನೆಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ವಜುವಾಯಿ ವಾಲಾ ನೂತನ ಸಚಿವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಮೊದಲಿಗೆ ಹಿರಿಯ ಶಾಸಕ ಗೋವಿಂದ ಕಾರಜೋಳ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಬಳಿಕ ಕ್ರಮವಾಗಿ ಡಾ.ಅಶ್ವಥ್ನಾರಾಯಣ್, ಲಕ್ಷ್ಮಣ ಸವದಿ, ಕೆ.ಎಸ್. ಈಶ್ವರಪ್ಪ, ಆರ್.ಅಶೋಕ್, ಜಗದೀಶ್ ಶೆಟ್ಟರ್ , ಶ್ರೀರಾಮುಲು, ಸುರೇಶ್ ಕುಮಾರ್, ವಿ.ಸೋಮಣ್ಣ, ಸಿ ಟಿ ರವಿ, ಬಸವರಾಜ ಬೊಮ್ಮಾಯಿ, ಕೋಟಾ ಶ್ರೀನಿವಾಸ್ ಪೂಜಾರಿ, ಜೆ ಸಿ ಮಾಧುಸ್ವಾಮಿ, ಸಿ ಸಿ ಪಾಟೀಲ್ , ನಾಗೇಶ್, ಪ್ರಭು ಚೌಹಾಣ್ , ಶಶಿಕಲಾ ಜೊಲ್ಲೆ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ವಿ.ಸೋಮಣ್ಣ ಅವರು ಬಸವಾದಿ ಶರಣರ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿದರು. ಕೆ.ಎಸ್. ಈಶ್ವರಪ್ಪ ಅವರು ಯಡಿಯೂರಪ್ಪ ಅವರ ಕಾಲಿಗೆ ನಮಸ್ಕರಿಸಿದರು. ಹಿರಿಯ ಶಾಸಕ ಜೆ.ಸಿ.ಮಾಧುಸ್ವಾಮಿ ಅವರು ಬಾಯಿತಪ್ಪಿನಿಂದ ಸಚಿವರಾಗಿ ಎನ್ನುವ ಬದಲು " ಮುಖ್ಯಮಂತ್ರಿಯಾಗಿ" ಎಂದು ಹೇಳಿದ್ದರು. ತಕ್ಷಣ ಸರಿಪರಿಸಿಕೊಂಡರು. ಬೀದರ್ ಜಿಲ್ಲೆ ಔರಾದ್ ಶಾಸಕ ಪ್ರಭು ಚೌಹಾಣ್ ಅವರು ಬಂಜಾರ ಸಮುದಾಯದ ಉಡುಪಿನಲ್ಲಿ ಬಂದು ಪ್ರಮಾಣ ವಚನ ಸ್ವೀಕರಿಸಿದರು. ಏಕೈಕ ಮಹಿಳಾ ಸಚಿವೆ ಜೊಲ್ಲೆ ಶಶಿಕಲಾ ಅಣ್ಣಾ ಸಾಹೇಬ್ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ನೂತನ ಸಚಿವರಿಗೆ ರಾಜ್ಯಪಾಲ ವಜುಬಾಯಿ ವಾಲಾ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದರು. ಪ್ರಮಾಣ ವಚನ ಸ್ವೀಕಾರದ ಬಳಿಕ ನೂತನ ಸಚಿವರು, ರಾಜ್ಯಪಾಲರು ಮತ್ತು ಮುಖ್ಯಮಂತ್ರಿಯೊಂದಿಗೆ ಸಾಮೂಹಿಕ ಛಾಯಾಚಿತ್ರ ತೆಗೆಸಿಕೊಂಡರು. ಕಾರ್ಯಕ್ರಮದಲ್ಲಿ ಪಕ್ಷದ ಹಿರಿಯ ಮುಖಂಡರು, ನೂತನ ಸಚಿವರ ಕುಟುಂಬದವರು, ಶಾಸಕರು, ಆಪ್ತರು, ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 