ಹಡಗಿನ ಮೂಲಕ 19 ಕಾರ್ಮಿಕರು ಮಂಗಳೂರಿಗೆ ಆಗಮನ
ಮಂಗಳೂರು, ಮೇ 28,ಲಾಕ್ಡೌನ್ನಿಂದಾಗಿ ಲಕ್ಷದ್ವೀಪದಲ್ಲಿ ಸಿಲುಕಿಕೊಂಡಿದ್ದ ಮಂಗಳೂರಿನ 19 ಮಂದಿ ಕಾರ್ಮಿಕರು ಇಂದು ಹಡಗಿನ ಮೂಲಕ ನಗರಕ್ಕೆ ಆಗಮಿಸಿದರು.ಲಕ್ಷದ್ವೀಪದ ‘ಅಮಿನ್ದಿವಿ’ ಎಂಬ ಹಡಗಿನಲ್ಲಿ ಈ ಕಾರ್ಮಿಕರನ್ನು ಮಂಗಳೂರು ಬಂದರಿಗೆ ಕರೆತರಲಾಯಿತು.ಲಕ್ಷದ್ವೀಪದ ವಿವಿಧ ದ್ವೀಪಗಳಲ್ಲಿ ದುಡಿಯುತ್ತಿದ್ದ ಈ 19 ಮಂದಿ ಕಾರ್ಮಿಕರು ಲಾಕ್ಡೌನ್ನಿಂದಾಗಿ ಸುಮಾರು ಎರಡು ತಿಂಗಳಿನಿಂದ ತಮ್ಮ ಊರುಗಳಿಗೆ ವಾಪಾಸಾಗಲು ಸಾಧ್ಯವಾಗಿರಲಿಲ್ಲ. ಇದೀಗ ಲಕ್ಷದ್ವೀಪ ಸರಕಾರ ಕರ್ನಾಟಕ ಸರಕಾರದ ಅನುಮತಿಯೊಂದಿಗೆ ಅಗತ್ಯ ಪ್ರಕ್ರಿಯೆಗಳನ್ನು ಪೂರೈಸಿ ಲಕ್ಷದ್ವೀಪದ ‘ಅಮಿನ್ದಿವಿ’ ಹಡಗಿನ ಮೂಲಕ ಕಾರ್ಮಿಕರನ್ನು ಕಳುಹಿಸಿಕೊಟ್ಟಿದೆ.
ಮೇಯರ್ ದಿವಾಕರ ಪಾಂಡೇಶ್ವರ, ಶಾಸಕರಾದ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಮಾಜಿ ಮೇಯರ್ ಅಶ್ರಫ್, ಸ್ಥಳೀಯ ಕಾರ್ಪೊರೇಟರ್ ಲತೀಫ್, ಕೊರೋನ ನಿಗ್ರಹದಳದ ಅಧಿಕಾರಿಗಳು, ಹಳೆ ಬಂದರಿನ ಲಕ್ಷದ್ವೀಪ ಜೆಟ್ಟಿಯಲ್ಲಿ ಬಂದರು ಸಂರಕ್ಷಣಾಧಿಕಾರಿ ಮುಹಮ್ಮದ್ ಗೌಸ್, ಹಳೆ ಬಂದರು ಬಳಕೆದಾರರ ಸಂಘಟನೆಯ ಪದಾಧಿಕಾರಿಗಳು, ಕಾರ್ಮಿಕರ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಕಾರ್ಮಿಕರನ್ನು ಬರಮಾಡಿಕೊಂಡರು.ಹಡಗು ದಡಕ್ಕೆ ಆಗಮಿಸಿದ ಬಳಿಕ ಹಡಗಿನಲ್ಲಿಯೇ ಅವರ ಆರೋಗ್ಯ ತಪಾಸಣೆ ನಡೆಸಲಾಯಿತು. ಸ್ಕ್ರೀನಿಂಗ್ ಬಳಿಕ ಅವರನ್ನು ಹಡಗಿನಿಂದ ಇಳಿಯಲು ಅವಕಾಶ ನೀಡಲಾಯಿತು. ಈ ವೇಳೆ ಕಾರ್ಮಿಕರ ಕುಟುಂಬದ ಸದಸ್ಯರು ಕೂಡ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 