211 ಕಲಾವಿದರಿಂದ 'ಸ್ವಾವಲಂಬಿ ಭಾರತ' ಪ್ರೇರಿತ ಹಾಡು
ನವದೆಹಲಿ, ಮೇ 18, ಜಾಗತಿಕ ಸಾಂಕ್ರಾಮಿಕ ಕೊರೊನಾದ ಹರಡುವಿಕೆಯನ್ನು ತಡೆಯಲು ರಾಷ್ಟ್ರವ್ಯಾಪಿ ಲಾಕ್ ಡೌನ್ ಮಾಡಲಾಗಿದ್ದು, ಈ ಮಧ್ಯೆ 211 ಕಲಾವಿದರು 'ಸ್ವಾವಲಂಬಿ ಭಾರತ' ಪ್ರೇರಿತವಾದ ಹಾಡನ್ನು ಹಾಡಿದ್ದಾರೆ.ಕೊರೊನಾ ವೈರಸ್ ಸಾಂಕ್ರಾಮಿಕದ ಮಧ್ಯೆ ಜನರ ಉತ್ಸಾಹವನ್ನು ಹೆಚ್ಚಿಸುವ ಸಲುವಾಗಿ, ದೇಶಾದ್ಯಂತದ ಜನಪ್ರಿಯ ಗಾಯಕರು ಒಂದು ಹಾಡನ್ನು ರಚಿಸಿದ್ದಾರೆ. ಇದು ದೇಶದ ವಿಷಮ ಪರಿಸ್ಥಿತಿಯಲ್ಲಿ ಜನರನ್ನು ರೋಮಾಂಚನಗೊಳಿಸುವಂತೆ ವಿನ್ಯಾಸಗೊಳಿಸಲಾಗಿದೆ. ಈ ಹಾಡಿನ ಪೂರ್ಣ ಹೆಸರು 'ಒನ್ ನೇಷನ್ ಒನ್ ವಾಯ್ಸ್ - ಜಯತು ಜಯತು ಭಾರತಮ್'.ದೇಶದ 200 ಕ್ಕೂ ಹೆಚ್ಚು ಪ್ರಸಿದ್ಧ ಗಾಯಕರು ಜಯತು ಜಯತು ಭಾರತಂ ಗೀತೆಗೆ ಧ್ವನಿ ನೀಡಿದ್ದಾರೆ. ಆಶಾ ಭೋಸ್ಲೆ, ಎಸ್ಪಿ ಬಾಲಸುಬ್ರಹ್ಮಣ್ಯಂ, ಶಂಕರ್ ಮಹಾದೇವನ್, ಸೋನು ನಿಗಮ್ ಮತ್ತು ಕೈಲಾಶ್ ಖೇರ್ ಅವರು ಸಹ ಗೀತೆಗೆ ಧ್ವನಿ ಗೂಡಿಸಿದ್ದಾರೆ. ಈ ಹಾಡನ್ನು ಪ್ರಸೂನ್ ಜೋಶಿ ಬರೆದಿದ್ದು, ಈ ಹಾಡನ್ನು 12 ಭಾಷೆಗಳಲ್ಲಿ ಸಂಯೋಜಿಸಲಾಗಿದೆ. ಸುರ್-ಸಾಮ್ರಾಜ್ಞಿ ಲತಾ ಮಂಗೇಶ್ಕರ್ ಅವರು "ನಮಸ್ಕರ್" ಹಾಡಿನ ಬಗ್ಗೆ ಟ್ವೀಟ್ ಮಾಡಿದ್ದಾರೆ. ನಮ್ಮ ಅತ್ಯಂತ ಪ್ರತಿಭಾವಂತ 211 ಕಲಾವಿದರು ಈ ಹಾಡನ್ನು ಸಂಯೋಜಿಸಿದ್ದಾರೆ. ಇದು ಸ್ವಾವಲಂಬಿ ಭಾರತದ ಉತ್ಸಾಹದಿಂದ ಪ್ರೇರಿತವಾಗಿದೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 