22 ದಿನ ಆಯ್ತು ಅತ್ತೆ, ಮಾವ ಹೇಗಿದ್ದಾರೋ ಗೊತ್ತಿಲ್ಲ: ಊರ್ಮಿಳಾ ಮಾತೋಂಡ್ಕರ್
ನವದೆಹಲಿ, ಆ 30 ಕಣಿವೆಯಲ್ಲಿ 370ನೇ ವಿಧಿಯನ್ನು ರದ್ದುಪಡಿಸಿ ಕೆಲನಿರ್ಬಂಧ ಹಾಕಿದ ನಂತರ ಕಳೆದ 22 ದಿನಗಳಿಂದ ತಂದೆ,ತಾಯಿ ಜೊತೆ ನನ್ನ ಪತಿ ಮಾತನಾಡಿಲ್ಲ ಎಂಬ ವೇದನೆಯನ್ನು ನಟಿ, ರಾಜಕಾರಣಿ ಊರ್ಮಿಳಾ ಮಾತೋಂಡ್ಕರ್ ಹೊರ ಹಾಕಿದ್ದಾರೆ. ಇಂಟರ್ ನೆಟ್ ನಿರ್ಬಂಧದ ಕಾರಣ ಕಳೆದ 22 ದಿನಗಳಿಂದ ಕಾಶ್ಮೀರದಲ್ಲಿ ವಾಸವಾಗಿರುವ ತನ್ನ ಹೆತ್ತವರೊಂದಿಗೆ ಮಾತನಾಡಲು ಪತಿಗೆ ಸಾಧ್ಯವಾಗುತ್ತಿಲ್ಲ ಎಂದು ನೋವು ತೋಡಿಕೊಂಡಿದ್ದಾರೆ. ರಾಜ್ಯಪಾಲ ಮಲಿಕ್ ವಿದೇಶದಲ್ಲಿ ಇರುವ ಮಗನ ಜೊತೆ ಮಾತನಾಡಲು ಆಗುತ್ತಿಲ್ಲ ಎಂದು ಪತ್ರಿಕೆಯೊಂದಿಗೆ ನೋವು, ಸಂಕಟ ತೋಡಿಕೊಂಡ ಬಳಿಕ ನಟಿಯ ಸಂಕಟವೂ ಹೊರಬಿದ್ದಿದೆ. 370ನೇ ವಿಧಿಯನ್ನು ರದ್ದುಪಡಿಸಿದ ಕ್ರಮ ಸರಕಾರ ಅಮಾನವೀಯ ಕ್ರಮವಾಗಿದೆ ಎಂದು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ನಿಂದ ಸ್ಪರ್ಧಿಸಿ ಸೋಲು ಕಂಡಿದ್ದ ಮಾತೋಂಡ್ಕರ್ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು. ನನ್ನ ಮಾವ ಮತ್ತು ಅತ್ತೆ ಅಲ್ಲಿಯೇ ಇದ್ದಾರೆ, ಅವರಿಬ್ಬರೂ ಮಧುಮೇಹ, ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ, 22 ದಿನ ಕಳೆದಿದ್ದರೂ ನಾನಾಗಲಿ ಅಥವಾ ಪತಿಯಾಗಲಿ ಅವರೊಂದಿಗೆ ಮಾತನಾಡಲು ಸಾಧ್ಯವಾಗಲಿಲ್ಲ ಎಂದು ಹೇಳಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 