ರಾಜ್ಯದಲ್ಲಿ ಆಳುವ ಪಕ್ಷದ 25 ಎಂಪಿಗಳು ಯಾವ ಪುರುಷಾರ್ಥಕ್ಕೆ: ಶ್ರೀಕಾಂತ್ ಸಾಲ್ಯಾನ್
ಬೆಂಗಳೂರು, ಮೇ 3, ರಾಜ್ಯದಲ್ಲಿ ಆಡಳಿತ ಪಕ್ಷದ 25 ಸಂಸದರಿದ್ದರೂ ವಲಸೆ ಕಾರ್ಮಿಕರನ್ನು ಸುರಕ್ಷಿತವಾಗಿ ಊರಿಗೆ ಕಳಿಸಲು ಸಾಧ್ಯವಾಗದಿರುವುದು ನಾಚಿಕೆಗೇಡು. ನಮ್ಮ ಪಕ್ಕದ ರಾಜ್ಯವಾದ ಕೇರಳವನ್ನಾದರು ನೋಡಿ ಸ್ವಲ ಕಲಿಯಬಾರದೇ. ಕೇರಳದಿಂದ ಇತರೆ ರಾಜ್ಯದ ಕಾರ್ಮಿಕರನ್ನು ಸ್ಪೆಷಲ್ ರೈಲು ಸೌಕರ್ಯ ಮಾಡಿ ಕಳುಹಿಸಿದ್ದಾರೆ. ಆದರೆ ನಮ್ಮ ರಾಜ್ಯ ಸರಕಾರ ಈ ಬಗ್ಗೆ ಗಂಭೀರವಾದ ಚಿಂತನೆ ನಡೆಸದಿರುವುದು ವಿಷಾದಕರವಾಗಿದೆ ಎಂದು ವೆಲ್ಫೇರ್ ಪಾರ್ಟಿಯ ರಾಜ್ಯದ ಉಪಾಧ್ಯಕ್ಷ ಶ್ರೀಕಾಂತ್ ಸಾಲ್ಯಾನ್ ಕಿಡಿಕಾರಿದ್ದಾರೆ.ಕಾರ್ಮಿಕರ ಕಲ್ಯಾಣ ನಿಧಿಯ ಮೊತ್ತವನ್ನು ಈ ಸಂಧರ್ಭದಲ್ಲಿ ಉಪಯೋಗಿಸಿ ಕಾರ್ಮಿಕರ ಸೇವೆ ಮಾಡಬೇಕಾದ್ದು ಸರಕಾರದ ಕರ್ತವ್ಯವೆಂಬುದನ್ನು ಸರಕಾರ ಮರೆತಂದಿದೆ.ಕೇವಲ ಕಾರ್ಮಿಕರ ದಿನಾಚರಣೆಯ ಸಂಧರ್ಭದಲ್ಲಿ ಶುಭಾಶಯ ಹೇಳುವುದರಲ್ಲಿ ಯಾವುದೇ ಪ್ರಯೋಜನವಿಲ್ಲ. ಕಾರ್ಮಿಕರ ಮೇಲೆ ಪ್ರೀತಿ ಕರುಣೆ ಇದ್ದರೆ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಕಾರ್ಮಿಕರ ಕೈಹಿಡಿಯಬೇಕಾಗಿದೆ. ಆದ್ದರಿಂದ ಸರಕಾರವು ಕೂಡಲೇ ರಾಜ್ಯದಲ್ಲಿರುವ ದೇಶದ ವಿವಿಧ ಭಾಗದ ಕಾರ್ಮಿಕರನ್ನು ಸುರಕ್ಷಿತವಾಗಿ ಅವರ ಊರಿಗೆ ತಲುಪಿಸಬೇಕೆಂದು ಅವರು ಹೇಳಿಕೆಯಲ್ಲಿ ಮನವಿ ಮಾಡಿದ್ದಾರೆ.
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ 